‘ಈ ವಿಚಾರವನ್ನು ಪ್ರತಿ ರೈತನ ಮನೆಗೆ ಹೋಗಿ ಹೇಳುತ್ತೇವೆ. ಕೃಷಿ ಮಸೂದೆಗಳ ಉದ್ದೇಶ ತಿಳಿಸಿಕೊಡುತ್ತೇವೆ. ರೈತ ಮುಖಂಡರು ಮುಂದೆ ಬಂದರೆ ಚರ್ಚಿಸಲು ಸಿದ್ಧ. ಆದರೆ, ರಾಜಕೀಯ ವಿರೋಧಿಗಳ ಜೊತೆ ಮಾತನಾಡುವುದಿಲ್ಲ. ಅವರದ್ದು ಬರೀ ವಿರೋಧದ ಕೆಲಸ. ನಾವು ತಂದಿರುವ ತಿದ್ದುಪಡಿಗಳನ್ನು ಹಿಂದೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡಿದ್ದ ಕಾಂಗ್ರೆಸ್ನವರು ಈಗ ನಮ್ಮನ್ನು ಟೀಕಿಸುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.