ಮೈಸೂರು: ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಸ್ವಾಯತ್ತತೆ ಪಡೆಯುವ ದಿಸೆಯಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂಬ ಭರವಸೆಯಲ್ಲಿರುವಾಗ, ಕೇಂದ್ರವನ್ನು ವಿಶ್ವವಿದ್ಯಾಲಯದ ಅಧೀನಕ್ಕೊಳಪಡಿಸುವ ಪ್ರಕ್ರಿಯೆ ನಡೆಯುತ್ತಿರುವುದು ದಿಗ್ಭ್ರಾಂತಿ ಮೂಡಿಸಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಇಡೀ ಶೈಕ್ಷಣಿಕ ಸಿಬ್ಬಂದಿಗೆ ಬಿಡುಗಡೆ ಪತ್ರ ನೀಡಿದ್ದು, ಅಧ್ಯಯನ ಕೇಂದ್ರವನ್ನು ಶಾಶ್ವತವಾಗಿ ಮುಚ್ಚುವ ಪ್ರಯತ್ನದ ಆರಂಭಿಕ ನಡೆಯಾಗಿದೆ’ ಎಂದು ಕೇಂದ್ರದ, ನಿವೃತ್ತ ಯೋಜನಾ ನಿರ್ದೇಶಕ ಡಾ.ಕೆ.ಆರ್.ದುರ್ಗಾದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.