ಶಾಸಕ ಜಿ.ಟಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಹತ್ತಿರವಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ‘ಕಳೆದ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಹೀನಾಯವಾಗಿ ಸೋಲಿಸಿದ್ದರು. ಬಾದಾಮಿಯಲ್ಲಿ ಗೆಲ್ಲದಿದ್ದರೆ, ಅವರು ಸಿದ್ದರಾಮನಹುಂಡಿಗೆ ಹೋಗಬೇಕಿತ್ತು. ವಾಸ್ತವ ಹೀಗಿದ್ದರೂ, ತಮ್ಮನ್ನು ಸೋಲಿಸಿದ್ದ ಜಿ.ಟಿ.ದೇವೇಗೌಡ ಅವರೊಂದಿಗೆ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ’ ಎಂದು ಹೇಳಿದರು.