ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಬೆಂಬಲಿಸಿ ಸಿದ್ದರಾಮಯ್ಯ ಶಕ್ತಿ ಹೆಚ್ಚಿಸಿ: ಸುಬ್ರಹ್ಮಣ್ಯ

Published 17 ಏಪ್ರಿಲ್ 2024, 13:34 IST
Last Updated 17 ಏಪ್ರಿಲ್ 2024, 13:34 IST
ಅಕ್ಷರ ಗಾತ್ರ

ಮೈಸೂರು: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಹೆಚ್ಚಿಸಬೇಕು’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಕರೆ ನೀಡಿದರು. 

ಇಲ್ಲಿನ ಸಿದ್ಧಾರ್ಥನಗರದ ಕನಕ ಭವನದಲ್ಲಿ ಮಂಗಳವಾರ ನಡೆದ ಮೈಸೂರು, ಕೊಡಗು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಕುರುಬ ಸಮುದಾಯದ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ನಮ್ಮ ಸಮುದಾಯದ ಸ್ಥಿತಿ ಹೇಗಿತ್ತು? ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಎಷ್ಟೆಲ್ಲಾ ಅಭಿವೃದ್ಧಿ ಕಾರ್ಯ ಆಗಿವೆ ಎಂಬುದನ್ನು ಅರಿಯಬೇಕು. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಭವನ, ವಿದ್ಯಾರ್ಥಿನಿಲಯ ಹಾಗೂ ಮಠದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಇದೆಲ್ಲವನ್ನೂ ಪರಿಗಣಿಸಬೇಕು. ಶೋಷಿತ ಸಮುದಾಯದವರೆಲ್ಲರೂ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಕೋರಿದರು.

‘ಬಿಜೆಪಿಯವರು, ನಮ್ಮ ಸಮುದಾಯದ ಒಬ್ಬರಿಗೂ ಲೋಕಸಭೆಯಲ್ಲಿ ಟಿಕೆಟ್ ನೀಡಿದೇ ಕಡೆಗಣಿಸಿದ್ದಾರೆ. ಬಿಜೆಪಿ ಸಂಘಟನೆಗೆ ಶ್ರಮಿಸಿದ್ದ ಕೆ.ಎಸ್. ಈಶ್ವರಪ್ಪ ಅವರಿಗೆ ಅನ್ಯಾಯ ಮಾಡಿದ್ದಾರೆ. ಆ ಪಕ್ಷದ ಕೆಲವರು ಗ್ಯಾರಂಟಿಗಳ ವಿರುದ್ಧ ಮಾತನಾಡಿದರು. ಆದರೆ, ಮುಖ್ಯಮಂತ್ರಿಯು ಜಾತ್ಯತೀತವಾಗಿ ಪ್ರತಿ ಕುಟುಂಬಕ್ಕೂ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಜನರು ನೆಮ್ಮದಿಯಿಂದ ಇದ್ದಾರೆ’ ಎಂದರು.

‘ನಮ್ಮ ಸಮಾಜದ ಏಳಿಗೆಗೆ ರಾಜಕೀಯದ ಬಲ ಅಗತ್ಯವಾಗಿದೆ. ಕಾಂತರಾಜ್‌ ವರದಿಯನ್ನು ಯಾರೂ ಸ್ವೀಕರಿಸಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಸ್ವೀಕರಿಸಿ ಸಾಮಾಜಿಕ ನ್ಯಾಯ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕೈ ಬಲಪಡಿಸಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT