‘ಬಿಜೆಪಿಯವರು, ನಮ್ಮ ಸಮುದಾಯದ ಒಬ್ಬರಿಗೂ ಲೋಕಸಭೆಯಲ್ಲಿ ಟಿಕೆಟ್ ನೀಡಿದೇ ಕಡೆಗಣಿಸಿದ್ದಾರೆ. ಬಿಜೆಪಿ ಸಂಘಟನೆಗೆ ಶ್ರಮಿಸಿದ್ದ ಕೆ.ಎಸ್. ಈಶ್ವರಪ್ಪ ಅವರಿಗೆ ಅನ್ಯಾಯ ಮಾಡಿದ್ದಾರೆ. ಆ ಪಕ್ಷದ ಕೆಲವರು ಗ್ಯಾರಂಟಿಗಳ ವಿರುದ್ಧ ಮಾತನಾಡಿದರು. ಆದರೆ, ಮುಖ್ಯಮಂತ್ರಿಯು ಜಾತ್ಯತೀತವಾಗಿ ಪ್ರತಿ ಕುಟುಂಬಕ್ಕೂ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಜನರು ನೆಮ್ಮದಿಯಿಂದ ಇದ್ದಾರೆ’ ಎಂದರು.