<p><strong>ಮೈಸೂರು</strong>: ಪಟ್ಟಣದ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಮತ್ತು ಹೌಸಿಂಗ್ ಬೋರ್ಡಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಉತ್ಸವ ಮತ್ತು ನವರಾತ್ರಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯುತ್ತಿದ್ದು, ದೇಗುಲ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದೆ.</p>.<p>ವರದರಾಜ ಸ್ವಾಮಿ ದೇವಸ್ಥಾನ ಹಾಗೂ ಚಾಮುಂಡೇಶ್ವರಿ ದೇವಸ್ಥಾನಗಳಿಗೆ ಈಗಾಗಲೇ ಸುಣ್ಣ ಬಣ್ಣ ಹೊಡೆದು ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ಎರಡೂ ದೇವಸ್ಥಾನಗಳಿಂದ ಪ್ರತ್ಯೇಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ವರದರಾಜಸ್ವಾಮಿ ದೇವಸ್ಥಾನದಲ್ಲಿ ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ಲಕ್ಷ್ಮೀ ದೇವರ ಮೂರ್ತಿಗೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಭಾನುವಾರದಿಂದ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆ, ಉಯ್ಯಾಲೋತ್ಸವ, ಕಲ್ಯಾಣೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯುತ್ತಿದೆ.</p>.<p>ವಿಜಯದಶಮಿ ದಿನದಂದು ರಡೂ ದೇವಸ್ಥಾನಗಳ ಮೂಲ ದೇವರುಗಳ ಮೂರ್ತಿಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಇದರಲ್ಲಿ ಅನೇಕ ಕಲಾತಂಡಗಳು, ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ನಂತರ ಪೊಲೀಸ್ ಇಲಾಖೆಯಿಂದ ವರದರಾಜಸ್ವಾಮಿಗೆ ಗೌರವ ರಕ್ಷೆ ನೀಡುವ ಮೂಲಕ ಬನ್ನಿಮರಕ್ಕೆ ಪೊಲೀಸ್ ಪೂಜೆ ನೆರವೇರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಪಟ್ಟಣದ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಮತ್ತು ಹೌಸಿಂಗ್ ಬೋರ್ಡಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಉತ್ಸವ ಮತ್ತು ನವರಾತ್ರಿ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯುತ್ತಿದ್ದು, ದೇಗುಲ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದೆ.</p>.<p>ವರದರಾಜ ಸ್ವಾಮಿ ದೇವಸ್ಥಾನ ಹಾಗೂ ಚಾಮುಂಡೇಶ್ವರಿ ದೇವಸ್ಥಾನಗಳಿಗೆ ಈಗಾಗಲೇ ಸುಣ್ಣ ಬಣ್ಣ ಹೊಡೆದು ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ಎರಡೂ ದೇವಸ್ಥಾನಗಳಿಂದ ಪ್ರತ್ಯೇಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p>.<p>ವರದರಾಜಸ್ವಾಮಿ ದೇವಸ್ಥಾನದಲ್ಲಿ ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ಲಕ್ಷ್ಮೀ ದೇವರ ಮೂರ್ತಿಗೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಭಾನುವಾರದಿಂದ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆ, ಉಯ್ಯಾಲೋತ್ಸವ, ಕಲ್ಯಾಣೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯುತ್ತಿದೆ.</p>.<p>ವಿಜಯದಶಮಿ ದಿನದಂದು ರಡೂ ದೇವಸ್ಥಾನಗಳ ಮೂಲ ದೇವರುಗಳ ಮೂರ್ತಿಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಇದರಲ್ಲಿ ಅನೇಕ ಕಲಾತಂಡಗಳು, ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ನಂತರ ಪೊಲೀಸ್ ಇಲಾಖೆಯಿಂದ ವರದರಾಜಸ್ವಾಮಿಗೆ ಗೌರವ ರಕ್ಷೆ ನೀಡುವ ಮೂಲಕ ಬನ್ನಿಮರಕ್ಕೆ ಪೊಲೀಸ್ ಪೂಜೆ ನೆರವೇರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>