<p><strong>ಮೈಸೂರು</strong>: ‘ಕಬ್ಬಿನ ಎಫ್ಆರ್ಪಿ ನಿಗದಿಯಲ್ಲಿ ಇಳುವರಿ ಪ್ರಮಾಣ 8.5ಕ್ಕೆ ಇಳಿಸಬೇಕು. ಎಸ್ಎಪಿ ದರವನ್ನು ಟನ್ಗೆ ಕನಿಷ್ಠ ₹500 ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ, ಆ.21ರಂದು ಬೆಂಗಳೂರಿನ ಕಬ್ಬು ನಿಯಂತ್ರಣ ಮಂಡಳಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಎಚ್ಚರಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಸಾಲಿನಲ್ಲಿ ನೀಡಬೇಕಿದ್ದ ಟನ್ಗೆ ₹150 ಹೆಚ್ಚುವರಿ ಹಣ ಇನ್ನೂ ಸಂದಾಯವಾಗಿಲ್ಲ. ಕೂಡಲೇ, ಹಳೇ ಬಾಕಿ ನೀಡಬೇಕು. ಉತ್ತರ ಕರ್ನಾಟಕದಂತೆ ಇಲ್ಲಿಯೂ ಸಕ್ಕರೆ ಕಾರ್ಖಾನೆಯಿಂದಲೇ ಕಬ್ಬು ಕಟಾವಿಗೆ ನಿರ್ದೇಶಿಸಬೇಕು. ಸಂಘದ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>‘ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ ಸಾಲಿನಲ್ಲಿ ರೈತರಿಗೆ ನೀಡಬೇಕಾದ ಕಬ್ಬಿನ ಬಾಕಿಯಲ್ಲಿ ಸರ್ಕಾರದ ಆದೇಶದಂತೆ ₹150 ಹೆಚ್ಚುವರಿ ಹಣ ನೀಡಿಲ್ಲ. ಜತೆಗೆ ಟನ್ ಕಬ್ಬಿಗೆ ₹24.70ನಷ್ಟು ಕಡಿಮೆ ದರ ನಿಗದಿ ಮಾಡಿ ನಷ್ಟ ಉಂಟುಮಾಡಿದ್ದಾರೆ. ಇವೆರಡನ್ನೂ ನೀಡುವಂತೆ ಸರ್ಕಾರ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದರು.</p>.<p>‘ಆ.17ರಂದು, ಕೋಚನಹಳ್ಳಿ ರೈತರಿಗಾದ ಭೂವಂಚನೆಯನ್ನು ಸರಿಪಡಿಸಲು ಆಗ್ರಹಿಸಿ, ಅಧಿಕಾರಿಗಳ ನಿಷ್ಕ್ರಿಯತೆ ವಿರೋಧಿಸಿ ಎಸ್ಪಿ ಕಚೇರಿಗೆ ಕೋಚನಹಳ್ಳಿಯಿಂದ ಪಾದಯಾತ್ರೆ ತೆರಳಿ ಮುತ್ತಿಗೆ ಹಾಕಲಾಗುವುದು’ ಎಂದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ‘ಹನಗೋಡು ಹೋಬಳಿಯ ಕಡೆಮನುಗನಹಳ್ಳಿಯಲ್ಲಿ ರೈತರೊಬ್ಬರ ಅಡಿಕೆ ತೋಟದಲ್ಲಿ 600 ಮರಗಳನ್ನು ದುಷ್ಕರ್ಮಿ ಕಡಿದು ಹಾಕಿದ್ದು, ಪೊಲೀಸರೂ ಸಮಗ್ರ ತನಿಖೆ ಮಾಡದೇ, ಬೇಜಾವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ಗುರು ಲಿಂಗೇಗೌಡ, ತಾಲ್ಲೂಕು ಅಧ್ಯಕ್ಷ ಪ್ರಭಾಕರ್, ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ, ರೈತ ಮುಖಂಡರಾದ ಪ್ರಸನ್ನ ಎನ್.ಗೌಡ, ಬಿಳಿಗೆರೆ ರಾಮಲಿಂಗೇಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕಬ್ಬಿನ ಎಫ್ಆರ್ಪಿ ನಿಗದಿಯಲ್ಲಿ ಇಳುವರಿ ಪ್ರಮಾಣ 8.5ಕ್ಕೆ ಇಳಿಸಬೇಕು. ಎಸ್ಎಪಿ ದರವನ್ನು ಟನ್ಗೆ ಕನಿಷ್ಠ ₹500 ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ, ಆ.21ರಂದು ಬೆಂಗಳೂರಿನ ಕಬ್ಬು ನಿಯಂತ್ರಣ ಮಂಡಳಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಎಚ್ಚರಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಸಾಲಿನಲ್ಲಿ ನೀಡಬೇಕಿದ್ದ ಟನ್ಗೆ ₹150 ಹೆಚ್ಚುವರಿ ಹಣ ಇನ್ನೂ ಸಂದಾಯವಾಗಿಲ್ಲ. ಕೂಡಲೇ, ಹಳೇ ಬಾಕಿ ನೀಡಬೇಕು. ಉತ್ತರ ಕರ್ನಾಟಕದಂತೆ ಇಲ್ಲಿಯೂ ಸಕ್ಕರೆ ಕಾರ್ಖಾನೆಯಿಂದಲೇ ಕಬ್ಬು ಕಟಾವಿಗೆ ನಿರ್ದೇಶಿಸಬೇಕು. ಸಂಘದ ಎಲ್ಲ ಮುಖಂಡರು ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>‘ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ ಸಾಲಿನಲ್ಲಿ ರೈತರಿಗೆ ನೀಡಬೇಕಾದ ಕಬ್ಬಿನ ಬಾಕಿಯಲ್ಲಿ ಸರ್ಕಾರದ ಆದೇಶದಂತೆ ₹150 ಹೆಚ್ಚುವರಿ ಹಣ ನೀಡಿಲ್ಲ. ಜತೆಗೆ ಟನ್ ಕಬ್ಬಿಗೆ ₹24.70ನಷ್ಟು ಕಡಿಮೆ ದರ ನಿಗದಿ ಮಾಡಿ ನಷ್ಟ ಉಂಟುಮಾಡಿದ್ದಾರೆ. ಇವೆರಡನ್ನೂ ನೀಡುವಂತೆ ಸರ್ಕಾರ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದರು.</p>.<p>‘ಆ.17ರಂದು, ಕೋಚನಹಳ್ಳಿ ರೈತರಿಗಾದ ಭೂವಂಚನೆಯನ್ನು ಸರಿಪಡಿಸಲು ಆಗ್ರಹಿಸಿ, ಅಧಿಕಾರಿಗಳ ನಿಷ್ಕ್ರಿಯತೆ ವಿರೋಧಿಸಿ ಎಸ್ಪಿ ಕಚೇರಿಗೆ ಕೋಚನಹಳ್ಳಿಯಿಂದ ಪಾದಯಾತ್ರೆ ತೆರಳಿ ಮುತ್ತಿಗೆ ಹಾಕಲಾಗುವುದು’ ಎಂದರು.</p>.<p>ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ‘ಹನಗೋಡು ಹೋಬಳಿಯ ಕಡೆಮನುಗನಹಳ್ಳಿಯಲ್ಲಿ ರೈತರೊಬ್ಬರ ಅಡಿಕೆ ತೋಟದಲ್ಲಿ 600 ಮರಗಳನ್ನು ದುಷ್ಕರ್ಮಿ ಕಡಿದು ಹಾಕಿದ್ದು, ಪೊಲೀಸರೂ ಸಮಗ್ರ ತನಿಖೆ ಮಾಡದೇ, ಬೇಜಾವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಉಪಾಧ್ಯಕ್ಷ ಗುರು ಲಿಂಗೇಗೌಡ, ತಾಲ್ಲೂಕು ಅಧ್ಯಕ್ಷ ಪ್ರಭಾಕರ್, ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ, ರೈತ ಮುಖಂಡರಾದ ಪ್ರಸನ್ನ ಎನ್.ಗೌಡ, ಬಿಳಿಗೆರೆ ರಾಮಲಿಂಗೇಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>