<p><strong>ಮೈಸೂರು</strong>: ‘ವರುಣ ಕ್ಷೇತ್ರ ಅಭಿವೃದ್ದಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<p>ವರುಣ ಕ್ಷೇತ್ರದ ಪುಟ್ಟೇಗೌಡನ ಹುಂಡಿಯಲ್ಲಿ ಕೆಪಿಟಿಸಿಎಲ್ ಸಿ.ಎಸ್.ಆರ್. ನಿಧಿಯಡಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.</p>.<p>ಪುಟ್ಟೇಗೌಡನ ಹುಂಡಿ ಹಾಗೂ ಚಟ್ನಳ್ಳಿ ಗ್ರಾಮಗಳಲ್ಲಿ ₹45 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ, ಕೀಳನಪುರದಲ್ಲಿ ₹ 30 ಲಕ್ಷ ವೆಚ್ಚದಲ್ಲಿ 2 ಕೊಠಡಿ, ಕೆಂಪೇಗೌಡನ ಹುಂಡಿಯಲ್ಲಿ ₹15 ಲಕ್ಷ ವೆಚ್ಚದಲ್ಲಿ 1 ಕೊಠಡಿ, ಮೆಲ್ಲಹಳ್ಳಿಯಲ್ಲಿ ಕೊಠಡಿ ನಿರ್ಮಾಣದ ಜೊತೆಗೆ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಈ ಹಿಂದೆ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹11.5 ಕೋಟಿ ನೀಡಲಾಗಿತ್ತು. ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಿಎಸ್ಆರ್ ನಿಧಿ ಅಡಿ ಕೊಠಡಿ ನಿರ್ಮಾಣ ಮಾಡುತ್ತಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.</p>.<p>ತಹಶೀಲ್ದಾರ್ ಮಹೇಶ್ಕುಮಾರ್, ಇಒ ಕೃಷ್ಣ, ಡಿಡಿಪಿಐ ಉದಯ್ಕುಮಾರ್, ಬಿಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜುಂಡಸ್ವಾಮಿ, ಮಹದೇವಪ್ಪ, ಮುಖಂಡರಾದ ಬೀರೇಗೌಡ, ಮಹದೇವಪ್ಪ ಎಂ.ಟಿ. ರವಿಕುಮಾರ್ ಜಿ.ಕೆ. ಬಸವಣ್ಣ, ಸಿದ್ದರಾಮೇಗೌಡ, ಶಿವಸ್ವಾಮಿ, ಪ್ರದೀಪ್ಕುಮಾರ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವರುಣ ಕ್ಷೇತ್ರ ಅಭಿವೃದ್ದಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p>.<p>ವರುಣ ಕ್ಷೇತ್ರದ ಪುಟ್ಟೇಗೌಡನ ಹುಂಡಿಯಲ್ಲಿ ಕೆಪಿಟಿಸಿಎಲ್ ಸಿ.ಎಸ್.ಆರ್. ನಿಧಿಯಡಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.</p>.<p>ಪುಟ್ಟೇಗೌಡನ ಹುಂಡಿ ಹಾಗೂ ಚಟ್ನಳ್ಳಿ ಗ್ರಾಮಗಳಲ್ಲಿ ₹45 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ, ಕೀಳನಪುರದಲ್ಲಿ ₹ 30 ಲಕ್ಷ ವೆಚ್ಚದಲ್ಲಿ 2 ಕೊಠಡಿ, ಕೆಂಪೇಗೌಡನ ಹುಂಡಿಯಲ್ಲಿ ₹15 ಲಕ್ಷ ವೆಚ್ಚದಲ್ಲಿ 1 ಕೊಠಡಿ, ಮೆಲ್ಲಹಳ್ಳಿಯಲ್ಲಿ ಕೊಠಡಿ ನಿರ್ಮಾಣದ ಜೊತೆಗೆ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಈ ಹಿಂದೆ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹11.5 ಕೋಟಿ ನೀಡಲಾಗಿತ್ತು. ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಿಎಸ್ಆರ್ ನಿಧಿ ಅಡಿ ಕೊಠಡಿ ನಿರ್ಮಾಣ ಮಾಡುತ್ತಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.</p>.<p>ತಹಶೀಲ್ದಾರ್ ಮಹೇಶ್ಕುಮಾರ್, ಇಒ ಕೃಷ್ಣ, ಡಿಡಿಪಿಐ ಉದಯ್ಕುಮಾರ್, ಬಿಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜುಂಡಸ್ವಾಮಿ, ಮಹದೇವಪ್ಪ, ಮುಖಂಡರಾದ ಬೀರೇಗೌಡ, ಮಹದೇವಪ್ಪ ಎಂ.ಟಿ. ರವಿಕುಮಾರ್ ಜಿ.ಕೆ. ಬಸವಣ್ಣ, ಸಿದ್ದರಾಮೇಗೌಡ, ಶಿವಸ್ವಾಮಿ, ಪ್ರದೀಪ್ಕುಮಾರ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>