ಶುಕ್ರವಾರ ಬೆಳಗಿನ ಜಾವ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾಗಿದ್ದು, ತೀವ್ರವಾಗಿ ಗಾಯಗೊಂಡು ಎರಡು ವರ್ಷದ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ನಂತರ ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಉಪವಲಯ ಅರಣ್ಯಾಧಿಕಾರಿ ಮಂಜು ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ಚಿರತೆಯ ಕಳೆಬರವನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸುಡಲಾಯಿತು.