‘ಮುನ್ನೆಚ್ಚರಿಕೆ ಕ್ರಮವಾಗಿ ವಾಹನಗಳ ತಪಾಸಣೆ ನಡೆಸಿದ್ದೇವೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಿದ್ದೇವೆ. ಅನುಮಾನಾಸ್ಪದ ವ್ಯಕ್ತಿಗಳಿದ್ದರೆ ಅವರ ಬಗ್ಗೆ ತನಿಖೆ ನಡೆಸಲಿದ್ದೇವೆ. ಸಹೋದ್ಯೋಗಿಗಳಿಗೆ ಹುರುಪು ತುಂಬಲು ತಂಡದ ಮುಖ್ಯಸ್ಥನಾಗಿ ನಾನೇ ಕಾರ್ಯಾಚರಣೆಗೆ ಇಳಿದಿದ್ದೇನೆ’ ಎಂದು ರಮೇಶ್ ಬಾನೋತ್ ತಿಳಿಸಿದರು.