<p><strong>ಮೈಸೂರು:</strong> ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗಳನ್ನು 5 ರಿಂದ 10 ಕೋಟಿ ರೂಪಾಯಿಗೆ ಕೊಂಡುಕೊಳ್ಳಲಾಗಿದೆ ಎಂದು ಮಾಜಿ ಸ್ಪೀಕರ್ ಕೃಷ್ಣ ವಿಷಾದದಿಂದ ಹೇಳಿದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ಮೈಸೂರು ವಿ.ವಿ ಎನ್ಎಸ್ಎಸ್ ಮತ್ತು ನೆಹರು ಯುವಕೇಂದ್ರ, ಎಂಎಂಕೆ ಮತ್ತು ಎಸ್ಡಿಎಂ ಮಹಿಳಾ ವಿದ್ಯಾಲಯದ ಎನ್ಎಸ್ಎಸ್ ಘಟಕವು ಸೋಮವಾರ ಹಮ್ಮಿಕೊಂಡಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಮಟ್ಟದ ‘ರಾಷ್ಟ್ರೀಯ ಯುವ ಸಂಸತ್ ಉತ್ಸವ’ವನ್ನುಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶಕಟ್ಟುವ ವಿಶ್ವವಿದ್ಯಾಲಯಗಳು ಇಂದು ಅಧೋಗತಿಗೆ ಇಳಿದಿವೆ. ಅರ್ಹರು ಯಾರೂ ಕುಲಪತಿ ಹುದ್ದೆಗೆ ಏರಲು ಸಾಧ್ಯವೇ ಇಲ್ಲ. ಹುದ್ದೆಯನ್ನು ಹಣ ಕೊಟ್ಟು ಕೊಂಡಮೇಲೆ ಗುಣಮಟ್ಟವನ್ನು ಹೇಗೆ ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.</p>.<p>ಇದು ರಾಜ್ಯಕ್ಕೆ ಮಾತ್ರ ಮೀಸಲಲ್ಲ. ಇದು ಇಡೀ ದೇಶದ ಎಲ್ಲ ವಿಶ್ವವಿದ್ಯಾಲಯಗಳ ಕತೆ. ಇದರಿಂದಾಗಿಯೇ ವಿಶ್ವದ 200 ಶ್ರೇಷ್ಠವಿಶ್ವವಿದ್ಯಾಲಯಗಳಲ್ಲಿ ದೇಶದ ಒಂದು ವಿಶ್ವವಿದ್ಯಾಲಯವೂ ಸ್ಥಾನ ಪಡೆದುಕೊಳ್ಳಲು ವಿಫಲವಾಗಿದೆ ಎಂದು ವಿಷಾದದಿಂದ ಹೇಳಿದರು.</p>.<p>ರಾಜಕೀಯ ಕ್ಷೇತ್ರದಲ್ಲಿ ಮಾತ್ರ ಈ ರೀತಿಯ ಪರಿಸ್ಥಿತಿ ಇತ್ತು. ಈಗ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ. ಕೋಟಿ ಕೋಟಿ ರೂಪಾಯಿ ಹಣ ಹೊಂದಿದ್ದರೆ ಮಾತ್ರ ರಾಜಕೀಯ ಪಕ್ಷಗಳು ಚುನಾವಣೆಗಳಿಗೆ ಟಿಕೆಟ್ ನೀಡುತ್ತವೆ. ಗೆಲ್ಲುವವರಿಗೆ ಟಿಕೆಟ್ ಕೊಡಬೇಕು ಎನ್ನುವುದು ಕೇವಲ ಹೇಳಿಕೆಯ ಮಾತಷ್ಟೇ. ದುಡ್ಡಿದ್ದವರು ನಾಯಕರಾಗುವ ಕಾಲವಿದು. ಆ ಹಣವನ್ನು ಬ್ಯಾಂಕ್ ಲೂಟಿ ಮಾಡಿ ಕೂಡಿಟ್ಟರೊ ಕೊಲೆ ಮಾಡಿ ಸಂಪಾದಿಸಿದರೊ ಎನ್ನುವುದು ಯಾರಿಗೂ ಮುಖ್ಯವಾಗಿಲ್ಲ ಎಂದು ಬೇಸರದಿಂದ ನುಡಿದರು.</p>.<p>ಸಾಮಾಜಿಕ ವ್ಯವಸ್ಥೆಯ ಬಗ್ಗೆ ಯುವಕರಿಗೆ ನಂಬಿಕೆ ಹೋಗಿದೆ. ಪ್ರತಿಭೆಗೆ ವೇದಿಕೆ ಸಿಗುತ್ತಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಇದರಿಂದಾಗಿ ದೇಶದ ಪ್ರಗತಿ ಕುಂಠಿತವಾಗುತ್ತಿದೆ. ರಾಜಕಾರಣಿಗಳು ಮಾಡಿರುವ ಈ ತಪ್ಪಿನಿಂದ ಜನಸಾಮಾನ್ಯರು ನೋವುಣ್ಣುವಂತಾಗಿದೆ. ಇಲ್ಲವಾದಲ್ಲಿ ಈ ರೀತಿಯ ಅಧೋಗತಿಗೆ ದೇಶ ಹೋಗುತ್ತಿರಲಿಲ್ಲ ಎಂದು ಹೇಳಿದರು.</p>.<p>ಆದರೆ, ಯುವಕರು ನಿರಾಶಾವಾದಿಗಳಾಗಬಾರದು. ಜ್ಞಾನ ಸಂಪಾದಿಸುವ ಪ್ರಯತ್ನ ಕೈಬಿಡಬಾರದು. ಅದು ಅವರನ್ನು ವೈಯಕ್ತಿಕವಾಗಿಯೂ ಸಾಮಾಜಿಕವಾಗಿಯೂ ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.</p>.<p>ಎಂಎಂಕೆ ಮತ್ತು ಎಸ್ಡಿಎಂ ಮಹಿಳಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ.ಸಾಯಿನಾಥ ಮಲ್ಲಿಗೆಮಾಡು ಅಧ್ಯಕ್ಷತೆವಹಿಸಿದ್ದರು. ಕಾಂಗ್ರೆಸ್ ಮುಖಂಡ ಪುರುಷೋತ್ತಮ, ಮೈಸೂರು ವಿ.ವಿ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ಬಿ.ಚಂದ್ರಶೇಖರ, ನೆಹರೂ ಯುವಕೇಂದ್ರದ ಯುವ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗಳನ್ನು 5 ರಿಂದ 10 ಕೋಟಿ ರೂಪಾಯಿಗೆ ಕೊಂಡುಕೊಳ್ಳಲಾಗಿದೆ ಎಂದು ಮಾಜಿ ಸ್ಪೀಕರ್ ಕೃಷ್ಣ ವಿಷಾದದಿಂದ ಹೇಳಿದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ಮೈಸೂರು ವಿ.ವಿ ಎನ್ಎಸ್ಎಸ್ ಮತ್ತು ನೆಹರು ಯುವಕೇಂದ್ರ, ಎಂಎಂಕೆ ಮತ್ತು ಎಸ್ಡಿಎಂ ಮಹಿಳಾ ವಿದ್ಯಾಲಯದ ಎನ್ಎಸ್ಎಸ್ ಘಟಕವು ಸೋಮವಾರ ಹಮ್ಮಿಕೊಂಡಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಮಟ್ಟದ ‘ರಾಷ್ಟ್ರೀಯ ಯುವ ಸಂಸತ್ ಉತ್ಸವ’ವನ್ನುಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶಕಟ್ಟುವ ವಿಶ್ವವಿದ್ಯಾಲಯಗಳು ಇಂದು ಅಧೋಗತಿಗೆ ಇಳಿದಿವೆ. ಅರ್ಹರು ಯಾರೂ ಕುಲಪತಿ ಹುದ್ದೆಗೆ ಏರಲು ಸಾಧ್ಯವೇ ಇಲ್ಲ. ಹುದ್ದೆಯನ್ನು ಹಣ ಕೊಟ್ಟು ಕೊಂಡಮೇಲೆ ಗುಣಮಟ್ಟವನ್ನು ಹೇಗೆ ನಿರೀಕ್ಷಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.</p>.<p>ಇದು ರಾಜ್ಯಕ್ಕೆ ಮಾತ್ರ ಮೀಸಲಲ್ಲ. ಇದು ಇಡೀ ದೇಶದ ಎಲ್ಲ ವಿಶ್ವವಿದ್ಯಾಲಯಗಳ ಕತೆ. ಇದರಿಂದಾಗಿಯೇ ವಿಶ್ವದ 200 ಶ್ರೇಷ್ಠವಿಶ್ವವಿದ್ಯಾಲಯಗಳಲ್ಲಿ ದೇಶದ ಒಂದು ವಿಶ್ವವಿದ್ಯಾಲಯವೂ ಸ್ಥಾನ ಪಡೆದುಕೊಳ್ಳಲು ವಿಫಲವಾಗಿದೆ ಎಂದು ವಿಷಾದದಿಂದ ಹೇಳಿದರು.</p>.<p>ರಾಜಕೀಯ ಕ್ಷೇತ್ರದಲ್ಲಿ ಮಾತ್ರ ಈ ರೀತಿಯ ಪರಿಸ್ಥಿತಿ ಇತ್ತು. ಈಗ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ. ಕೋಟಿ ಕೋಟಿ ರೂಪಾಯಿ ಹಣ ಹೊಂದಿದ್ದರೆ ಮಾತ್ರ ರಾಜಕೀಯ ಪಕ್ಷಗಳು ಚುನಾವಣೆಗಳಿಗೆ ಟಿಕೆಟ್ ನೀಡುತ್ತವೆ. ಗೆಲ್ಲುವವರಿಗೆ ಟಿಕೆಟ್ ಕೊಡಬೇಕು ಎನ್ನುವುದು ಕೇವಲ ಹೇಳಿಕೆಯ ಮಾತಷ್ಟೇ. ದುಡ್ಡಿದ್ದವರು ನಾಯಕರಾಗುವ ಕಾಲವಿದು. ಆ ಹಣವನ್ನು ಬ್ಯಾಂಕ್ ಲೂಟಿ ಮಾಡಿ ಕೂಡಿಟ್ಟರೊ ಕೊಲೆ ಮಾಡಿ ಸಂಪಾದಿಸಿದರೊ ಎನ್ನುವುದು ಯಾರಿಗೂ ಮುಖ್ಯವಾಗಿಲ್ಲ ಎಂದು ಬೇಸರದಿಂದ ನುಡಿದರು.</p>.<p>ಸಾಮಾಜಿಕ ವ್ಯವಸ್ಥೆಯ ಬಗ್ಗೆ ಯುವಕರಿಗೆ ನಂಬಿಕೆ ಹೋಗಿದೆ. ಪ್ರತಿಭೆಗೆ ವೇದಿಕೆ ಸಿಗುತ್ತಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಇದರಿಂದಾಗಿ ದೇಶದ ಪ್ರಗತಿ ಕುಂಠಿತವಾಗುತ್ತಿದೆ. ರಾಜಕಾರಣಿಗಳು ಮಾಡಿರುವ ಈ ತಪ್ಪಿನಿಂದ ಜನಸಾಮಾನ್ಯರು ನೋವುಣ್ಣುವಂತಾಗಿದೆ. ಇಲ್ಲವಾದಲ್ಲಿ ಈ ರೀತಿಯ ಅಧೋಗತಿಗೆ ದೇಶ ಹೋಗುತ್ತಿರಲಿಲ್ಲ ಎಂದು ಹೇಳಿದರು.</p>.<p>ಆದರೆ, ಯುವಕರು ನಿರಾಶಾವಾದಿಗಳಾಗಬಾರದು. ಜ್ಞಾನ ಸಂಪಾದಿಸುವ ಪ್ರಯತ್ನ ಕೈಬಿಡಬಾರದು. ಅದು ಅವರನ್ನು ವೈಯಕ್ತಿಕವಾಗಿಯೂ ಸಾಮಾಜಿಕವಾಗಿಯೂ ಬೆಳೆಸುತ್ತದೆ ಎಂದು ಕಿವಿಮಾತು ಹೇಳಿದರು.</p>.<p>ಎಂಎಂಕೆ ಮತ್ತು ಎಸ್ಡಿಎಂ ಮಹಿಳಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ.ಸಾಯಿನಾಥ ಮಲ್ಲಿಗೆಮಾಡು ಅಧ್ಯಕ್ಷತೆವಹಿಸಿದ್ದರು. ಕಾಂಗ್ರೆಸ್ ಮುಖಂಡ ಪುರುಷೋತ್ತಮ, ಮೈಸೂರು ವಿ.ವಿ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ಬಿ.ಚಂದ್ರಶೇಖರ, ನೆಹರೂ ಯುವಕೇಂದ್ರದ ಯುವ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>