ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಡಾ ಅಂಗಡಿ ಬಿಲ್ ವಿಚಾರಕ್ಕೆ ಮಾಜಿ ಶಾಸಕ ಸಾ.ರಾ.ಮಹೇಶ್ ಪುತ್ರ–ಪತ್ರಕರ್ತನ ಮಗನ ಗಲಾಟೆ

ಹರಿದಾಡಿದ ವಿಡಿಯೊ
Published 26 ಜೂನ್ 2023, 6:55 IST
Last Updated 26 ಜೂನ್ 2023, 6:55 IST
ಅಕ್ಷರ ಗಾತ್ರ

ಮೈಸೂರು: ನಗರದ ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರದಲ್ಲಿ ಮಾಜಿ ಶಾಸಕ ಸಾ.ರಾ.ಮಹೇಶ್ ಮಗ ಸಾ.ರಾ.ಜಯಂತ್‌ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಜಗಳ ನಡೆದಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಕುವೆಂಪುನಗರದಲ್ಲಿರುವ ಹೋಟೆಲ್‌ವೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದೆ.

ಊಟದ ಬಳಿಕ ಬೀಡಾ ತಿಂದು ಹಣ ನೀಡಲು ಸಾ.ರಾ.ಮಹೇಶ್ ಮಗ ಮುಂದಾದಾಗ ಪತ್ರಕರ್ತರ ಪುತ್ರ ಸ್ಕ್ಯಾನರ್‌ಗೆ ಅಡ್ಡ ನಿಂತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ; ಹೊಡೆದಾಡಿಕೊಂಡಿದ್ದಾರೆ.

ಕುವೆಂಪುನಗರ ಪೊಲೀಸರು ಇಬ್ಬರನ್ನೂ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT