<p><strong>ಮೈಸೂರು: </strong>ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಆರೋಪಿಸಿದರು.</p>.<p>‘ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲ 25 ಸ್ಥಾನಗಳಲ್ಲಿ ಸ್ಪರ್ಧಿಸಬೇಕಿತ್ತು. ಆದರೆ, ಕೇವಲ 7 ಸ್ಥಾನದಲ್ಲಿ ಸ್ಪರ್ಧಿಸಿದೆ. ಅಭ್ಯರ್ಥಿ ಇಲ್ಲದಿದ್ದರೆ ಅಭ್ಯರ್ಥಿ ಇಲ್ಲ ಎಂದು ಬಹಿರಂಗವಾಗಿ ಹೇಳಲಿ’ ಎಂದು ಇಲ್ಲಿ ಬುಧವಾರ ಸವಾಲೆಸೆದರು.</p>.<p>‘ಬಿಜೆಪಿಗೆ ಲಾಭ ಮಾಡಿಕೊಡಲೆಂದೇ ಜೆಡಿಎಸ್ ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸುವ ತಂತ್ರಗಾರಿಕೆ ನಡೆಸಿದೆ’ ಎಂದರು.</p>.<p>‘ನನ್ನ ಬೆಂಬಲಿಗರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಅಡ್ಡಿಪಡಿಸಿಲ್ಲ. ಸಿದ್ದರಾಮಯ್ಯ ತಮ್ಮ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ರಾಜ್ಕುಮಾರ್ ಅವರ ಕಾರ್ಯಕ್ರಮ ಇದ್ದುದ್ದರಿಂದ ಅವರು ಕೇವಲ 5 ನಿಮಿಷ ಮಾತನಾಡಿ ತೆರಳಿದ್ದಾರೆ. ನನಗೆ ಜಯಕಾರ ಹಾಕಿದ್ದನ್ನು ನೋಡಿ ಅವರಿಗೂ ಖುಷಿಯಾಗಿದೆ. ಈ ಕುರಿತು ನನ್ನೊಂದಿಗೆ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನನ್ನ ಮತ್ತು ಅವರ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಮಳೆಯಿಂದಾಗಿ ಬೆಂಗಳೂರಿನ ಎಲ್ಲೆಡೆ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/illegal-assets-case-acb-officers-raid-in-across-karnataka-bengaluru-886580.html" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</a></strong></p>.<p><a href="https://www.prajavani.net/district/kalaburagi/illegal-assets-case-acb-raid-in-kalaburagi-district-886591.html" target="_blank"><strong>ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ</strong></a></p>.<p><a href="https://www.prajavani.net/district/dakshina-kannada/illegal-assets-case-acb-raid-in-mangalore-city-886599.html" target="_blank"><strong>ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ</strong></a></p>.<p><strong><a href="https://www.prajavani.net/district/gadaga/illegal-assets-case-acb-raid-in-gadag-city-886608.html" target="_blank">ಗದಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಆರೋಪಿಸಿದರು.</p>.<p>‘ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲ 25 ಸ್ಥಾನಗಳಲ್ಲಿ ಸ್ಪರ್ಧಿಸಬೇಕಿತ್ತು. ಆದರೆ, ಕೇವಲ 7 ಸ್ಥಾನದಲ್ಲಿ ಸ್ಪರ್ಧಿಸಿದೆ. ಅಭ್ಯರ್ಥಿ ಇಲ್ಲದಿದ್ದರೆ ಅಭ್ಯರ್ಥಿ ಇಲ್ಲ ಎಂದು ಬಹಿರಂಗವಾಗಿ ಹೇಳಲಿ’ ಎಂದು ಇಲ್ಲಿ ಬುಧವಾರ ಸವಾಲೆಸೆದರು.</p>.<p>‘ಬಿಜೆಪಿಗೆ ಲಾಭ ಮಾಡಿಕೊಡಲೆಂದೇ ಜೆಡಿಎಸ್ ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸುವ ತಂತ್ರಗಾರಿಕೆ ನಡೆಸಿದೆ’ ಎಂದರು.</p>.<p>‘ನನ್ನ ಬೆಂಬಲಿಗರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಅಡ್ಡಿಪಡಿಸಿಲ್ಲ. ಸಿದ್ದರಾಮಯ್ಯ ತಮ್ಮ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ರಾಜ್ಕುಮಾರ್ ಅವರ ಕಾರ್ಯಕ್ರಮ ಇದ್ದುದ್ದರಿಂದ ಅವರು ಕೇವಲ 5 ನಿಮಿಷ ಮಾತನಾಡಿ ತೆರಳಿದ್ದಾರೆ. ನನಗೆ ಜಯಕಾರ ಹಾಕಿದ್ದನ್ನು ನೋಡಿ ಅವರಿಗೂ ಖುಷಿಯಾಗಿದೆ. ಈ ಕುರಿತು ನನ್ನೊಂದಿಗೆ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನನ್ನ ಮತ್ತು ಅವರ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಮಳೆಯಿಂದಾಗಿ ಬೆಂಗಳೂರಿನ ಎಲ್ಲೆಡೆ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/illegal-assets-case-acb-officers-raid-in-across-karnataka-bengaluru-886580.html" target="_blank">ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ</a></strong></p>.<p><a href="https://www.prajavani.net/district/kalaburagi/illegal-assets-case-acb-raid-in-kalaburagi-district-886591.html" target="_blank"><strong>ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ</strong></a></p>.<p><a href="https://www.prajavani.net/district/dakshina-kannada/illegal-assets-case-acb-raid-in-mangalore-city-886599.html" target="_blank"><strong>ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ</strong></a></p>.<p><strong><a href="https://www.prajavani.net/district/gadaga/illegal-assets-case-acb-raid-in-gadag-city-886608.html" target="_blank">ಗದಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>