<p><strong>ಮೈಸೂರು:</strong> ‘ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ರಾಷ್ಟ್ರ ನಿರ್ಮಾಪಕರಾಗಿ ಯುವಕರು, ಪ್ರಗತಿಪರ ಭಾರತಕ್ಕಾಗಿ ದೃಷ್ಟಿ’ ಶೀರ್ಷಿಕೆಯಡಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಮಾತನಾಡಿದರು.</p>.<p>ರಾಜಕೀಯ ಮತ್ತು ಉದ್ಯಮಶೀಲತೆಯಂತಹ ಪ್ರಮುಖ ಕ್ಷೇತ್ರಗಳನ್ನು ವೇದಿಕೆಗಳಾಗಿ ಗುರುತಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಡಳಿತ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಅಧಿವೇಶನದಲ್ಲಿ ಗ್ರಾಮೀಣ, ನಗರ ಏಕೀಕರಣ, ಕೌಶಲ ಆಧಾರಿತ ಕಲಿಕೆ ಮತ್ತು ನಾವೀನ್ಯತೆ, ಸಂಪರ್ಕ ಉತ್ತೇಜಿಸುವಲ್ಲಿ ಶಿಕ್ಷಣದ ಪಾತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು.</p>.<p>ಕಾಲೇಜು ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶ್ರೀಶೈಲಾ ರಾಮಣ್ಣವರ್, ಪ್ರಾಂಶುಪಾಲ ಬಿ.ಸದಾಶಿವ ಗೌಡ, ನಿಖಿಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ರಾಷ್ಟ್ರ ನಿರ್ಮಾಪಕರಾಗಿ ಯುವಕರು, ಪ್ರಗತಿಪರ ಭಾರತಕ್ಕಾಗಿ ದೃಷ್ಟಿ’ ಶೀರ್ಷಿಕೆಯಡಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಮಾತನಾಡಿದರು.</p>.<p>ರಾಜಕೀಯ ಮತ್ತು ಉದ್ಯಮಶೀಲತೆಯಂತಹ ಪ್ರಮುಖ ಕ್ಷೇತ್ರಗಳನ್ನು ವೇದಿಕೆಗಳಾಗಿ ಗುರುತಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಡಳಿತ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಅಧಿವೇಶನದಲ್ಲಿ ಗ್ರಾಮೀಣ, ನಗರ ಏಕೀಕರಣ, ಕೌಶಲ ಆಧಾರಿತ ಕಲಿಕೆ ಮತ್ತು ನಾವೀನ್ಯತೆ, ಸಂಪರ್ಕ ಉತ್ತೇಜಿಸುವಲ್ಲಿ ಶಿಕ್ಷಣದ ಪಾತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು.</p>.<p>ಕಾಲೇಜು ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶ್ರೀಶೈಲಾ ರಾಮಣ್ಣವರ್, ಪ್ರಾಂಶುಪಾಲ ಬಿ.ಸದಾಶಿವ ಗೌಡ, ನಿಖಿಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>