‘ನ್ಯಾಯಾಧೀಶರ ನೇಮಕಾತಿಯಲ್ಲಿ 3 ಹಂತದ ಪರೀಕ್ಷೆಗಳಿರುತ್ತವೆ. ಪ್ರಾಯೋಗಿಕ ಜ್ಞಾನದೊಂದಿಗೆ ಪ್ರಚಲಿತ ವಿದ್ಯಮಾನಗಳ ಅರಿವೂ ಇರಬೇಕು. ನಾಲ್ಕೂವರೆ ಸಾವಿರ ಮಂದಿ ಪರೀಕ್ಷೆ ಬರೆಯುತ್ತಾರೆ. ಮುಖ್ಯ ಪರೀಕ್ಷೆಯನ್ನು ಸಾವಿರ ಮಂದಿ ಬರೆದಿದ್ದರು. ಶ್ರಮ ಹಾಗೂ ಅಭ್ಯಾಸವಿದ್ದರೆ ತೇರ್ಗಡೆಯಾಗಬಹುದು’ ಎಂದು ದೀಪಿಕಾ ತಿಳಿಸಿದರು. ‘ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಬಡವರು ನ್ಯಾಯ ಕೇಳಿ ಬಂದವರಿಗೆ ನ್ಯಾಯ ಸಿಗಬೇಕು. ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಿಷ್ಠೆ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವೆ’ ಎಂದರು.