<p><strong>ಮೈಸೂರು: ‘</strong>ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಳ್ಳಲಾಗಿರುವ ‘ಬಿಎಸ್ವೈ ಅಭಿಮಾನೋತ್ಸವ’ದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ ಹೇಳಿದರು.</p><p>ಇಲ್ಲಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಶನಿವಾರ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>‘ಕರ್ನಾಟಕದಲ್ಲಿ ಕೆಲವರು ಅದೃಷ್ಟದಿಂದ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ. ಸತತ ಹೋರಾಟದಿಂದ ಆ ಸ್ಥಾನ ಗಳಿಸಿದವರು. 50 ವರ್ಷಗಳ ರಾಜಕಾರಣದಲ್ಲಿ 45 ವರ್ಷ ಹೋರಾಟವನ್ನೇ ಮಾಡಿದ್ದಾರೆ. ಇದನ್ನು ಸ್ಮರಿಸುವ ಕಾರಣದಿಂದ ನಾವು ಸಮಾವೇಶ ನಡೆಸುತ್ತಿದ್ದೇವೆ’ ಎಂದರು.</p><p>‘ವಿಧಾನಸಭೆ ಚುನಾವಣೆಗೆ ಆರು ತಿಂಗಳಿದೆ ಎನ್ನುವಾಗ ಸಮಾವೇಶ ನಡೆಸಿದ್ದರೆ, ರಾಜಕೀಯ ಲಾಭದ ಲೆಕ್ಕಾಚಾರ ಹಾಕಬಹುದಿತ್ತು. ಈಗ ಆ ರೀತಿಯ ಪ್ರಶ್ನೆ ಉದ್ಭವಿಸುವುದಿಲ್ಲ. ರಾಜಕಾರಣಿಗಳ ಜೊತೆಗೆ, ರಾಜ್ಯದ ಬಹುತೇಕ ಮಠಾಧೀಶರೂ ಭಾಗವಹಿಸುತ್ತಾರೆ. ಸಮಾವೇಶದ ಸಂದೇಶ ಏನೆಂಬುದು ಅದು ಮುಗಿದ ಬಳಿಕ ಗೊತ್ತಾಗಲಿದೆ. 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಳ್ಳಲಾಗಿರುವ ‘ಬಿಎಸ್ವೈ ಅಭಿಮಾನೋತ್ಸವ’ದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ ಹೇಳಿದರು.</p><p>ಇಲ್ಲಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಶನಿವಾರ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p><p>‘ಕರ್ನಾಟಕದಲ್ಲಿ ಕೆಲವರು ಅದೃಷ್ಟದಿಂದ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ. ಸತತ ಹೋರಾಟದಿಂದ ಆ ಸ್ಥಾನ ಗಳಿಸಿದವರು. 50 ವರ್ಷಗಳ ರಾಜಕಾರಣದಲ್ಲಿ 45 ವರ್ಷ ಹೋರಾಟವನ್ನೇ ಮಾಡಿದ್ದಾರೆ. ಇದನ್ನು ಸ್ಮರಿಸುವ ಕಾರಣದಿಂದ ನಾವು ಸಮಾವೇಶ ನಡೆಸುತ್ತಿದ್ದೇವೆ’ ಎಂದರು.</p><p>‘ವಿಧಾನಸಭೆ ಚುನಾವಣೆಗೆ ಆರು ತಿಂಗಳಿದೆ ಎನ್ನುವಾಗ ಸಮಾವೇಶ ನಡೆಸಿದ್ದರೆ, ರಾಜಕೀಯ ಲಾಭದ ಲೆಕ್ಕಾಚಾರ ಹಾಕಬಹುದಿತ್ತು. ಈಗ ಆ ರೀತಿಯ ಪ್ರಶ್ನೆ ಉದ್ಭವಿಸುವುದಿಲ್ಲ. ರಾಜಕಾರಣಿಗಳ ಜೊತೆಗೆ, ರಾಜ್ಯದ ಬಹುತೇಕ ಮಠಾಧೀಶರೂ ಭಾಗವಹಿಸುತ್ತಾರೆ. ಸಮಾವೇಶದ ಸಂದೇಶ ಏನೆಂಬುದು ಅದು ಮುಗಿದ ಬಳಿಕ ಗೊತ್ತಾಗಲಿದೆ. 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>