<p><strong>ಮೈಸೂರು:</strong> ‘ಎಚ್.ಡಿ.ಕೋಟೆ ತಾಲ್ಲೂಕಿನ ಇಜ್ಬಾಲ ಏತ ನೀರಾವರಿ ಯೋಜನೆ ಅನುಷ್ಠಾನದಲ್ಲಿ ನೀರಾವರಿ ನಿಗಮದ ಅಧಿಕಾರಿಗಳು, ಎಂಜಿನಿಯರ್ಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿ ನಡೆಸುತ್ತಿದ್ದಾರೆ. ಬಾಧಿತ ರೈತರಿಗೆ ಸೂಕ್ತ ಪರಿಹಾರ ನೀಡದೆ ವಂಚಿಸುತ್ತಿದ್ದಾರೆ’ ಎಂದು ರೈತ ಕೃಷಿ ಕಾರ್ಮಿಕ ಸಂಘಟನೆಯ ಎಸ್.ಎನ್.ಸ್ವಾಮಿ ದೂರಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಈ ಯೋಜನೆ ಬಗ್ಗೆ ಸ್ಥಳೀಯರಿಗೆ ಸಮರ್ಪಕ ಮಾಹಿತಿ ನೀಡದಿದ್ದರೆ, ಕಾಮಗಾರಿ ನಡೆಸಲು ಅವಕಾಶವನ್ನೇ ನೀಡಲ್ಲ’ ಎಂದು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಈಗಾಗಲೇ ಪೈಪ್ಲೈನ್ ಕಾಮಗಾರಿಗೆ ತಡೆ ಹಾಕಿದ್ದೇವೆ. ಅಧಿಕಾರಿಗಳು ತಮ್ಮ ಧೋರಣೆ ಬದಲಿಸಿಕೊಳ್ಳದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ. ಜಿಲ್ಲಾಡಳಿತ ಈ ಯೋಜನೆಯಿಂದ ಬಾಧಿತರಾಗುವ ಹಳ್ಳಿಗಳ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಎಚ್.ಡಿ.ಕೋಟೆಯ ಕರಿಗಾಲದಿಂದ ಹೆರಗಳ್ಳಿ, ಹೊಮ್ಮರಗಳ್ಳಿ ಮತ್ತು ಮೈಸೂರು ತಾಲ್ಲೂಕಿನ ಮದ್ದೂರು, ಚಿಂಚರಾಯನ ಹುಂಡಿ, ಕಲ್ಲಹಳ್ಳಿ... ಹೀಗೆ ಜಯಪುರದವರೆಗೂ ಯೋಜನೆಯಡಿ ಏರುಕೊಳವೆ ಮಾರ್ಗದ ಪೈಪ್ಲೈನ್ ಕಾಮಗಾರಿ ನಡೆಯುತ್ತಿದೆ. ಆರ್ಎಫ್ಸಿಟಿಎಲ್ ಎಆರ್ಆರ್-2013 ಕಾಯ್ದೆಯ ಉಲ್ಲಂಘನೆ ಎಗ್ಗಿಲ್ಲದೆ ನಡೆದಿದ್ದು, ರೈತರನ್ನು ವಂಚಿಸಲಾಗುತ್ತಿದೆ’ ಎಂದು ಸ್ವಾಮಿ ದೂರಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅವಧಿಕಾರಿಗಳು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ರೈತರ ತೆಂಗು, ಮಾವು, ಬಾಳೆ, ಅರಿಶಿನ ಬೆಳೆಯನ್ನು ಧ್ವಂಸಗೊಳಿಸಿದ್ದಾರೆ. ಪ್ರಶ್ನಿಸಲು ಮುಂದಾದ ರೈತರನ್ನೇ ಬೆದರಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ರೈತರಿಗೆ ನ್ಯಾಯಬದ್ಧ ಪರಿಹಾರ ಒದಗಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ರೈತ ಕೃಷಿ ಕಾರ್ಮಿಕ ಸಂಘಟನೆಯ ಎಚ್.ಪಿ.ಶಿವಪ್ರಕಾಶ್, ಯೋಜನೆಯಿಂದ ಬಾಧಿತಗೊಂಡ ರೈತರಾದ ಮಂಜು, ದಿನೇಶ್, ಮಲ್ಲಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಎಚ್.ಡಿ.ಕೋಟೆ ತಾಲ್ಲೂಕಿನ ಇಜ್ಬಾಲ ಏತ ನೀರಾವರಿ ಯೋಜನೆ ಅನುಷ್ಠಾನದಲ್ಲಿ ನೀರಾವರಿ ನಿಗಮದ ಅಧಿಕಾರಿಗಳು, ಎಂಜಿನಿಯರ್ಗಳು ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿ ನಡೆಸುತ್ತಿದ್ದಾರೆ. ಬಾಧಿತ ರೈತರಿಗೆ ಸೂಕ್ತ ಪರಿಹಾರ ನೀಡದೆ ವಂಚಿಸುತ್ತಿದ್ದಾರೆ’ ಎಂದು ರೈತ ಕೃಷಿ ಕಾರ್ಮಿಕ ಸಂಘಟನೆಯ ಎಸ್.ಎನ್.ಸ್ವಾಮಿ ದೂರಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಈ ಯೋಜನೆ ಬಗ್ಗೆ ಸ್ಥಳೀಯರಿಗೆ ಸಮರ್ಪಕ ಮಾಹಿತಿ ನೀಡದಿದ್ದರೆ, ಕಾಮಗಾರಿ ನಡೆಸಲು ಅವಕಾಶವನ್ನೇ ನೀಡಲ್ಲ’ ಎಂದು ಶನಿವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.</p>.<p>‘ಈಗಾಗಲೇ ಪೈಪ್ಲೈನ್ ಕಾಮಗಾರಿಗೆ ತಡೆ ಹಾಕಿದ್ದೇವೆ. ಅಧಿಕಾರಿಗಳು ತಮ್ಮ ಧೋರಣೆ ಬದಲಿಸಿಕೊಳ್ಳದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ. ಜಿಲ್ಲಾಡಳಿತ ಈ ಯೋಜನೆಯಿಂದ ಬಾಧಿತರಾಗುವ ಹಳ್ಳಿಗಳ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಎಚ್.ಡಿ.ಕೋಟೆಯ ಕರಿಗಾಲದಿಂದ ಹೆರಗಳ್ಳಿ, ಹೊಮ್ಮರಗಳ್ಳಿ ಮತ್ತು ಮೈಸೂರು ತಾಲ್ಲೂಕಿನ ಮದ್ದೂರು, ಚಿಂಚರಾಯನ ಹುಂಡಿ, ಕಲ್ಲಹಳ್ಳಿ... ಹೀಗೆ ಜಯಪುರದವರೆಗೂ ಯೋಜನೆಯಡಿ ಏರುಕೊಳವೆ ಮಾರ್ಗದ ಪೈಪ್ಲೈನ್ ಕಾಮಗಾರಿ ನಡೆಯುತ್ತಿದೆ. ಆರ್ಎಫ್ಸಿಟಿಎಲ್ ಎಆರ್ಆರ್-2013 ಕಾಯ್ದೆಯ ಉಲ್ಲಂಘನೆ ಎಗ್ಗಿಲ್ಲದೆ ನಡೆದಿದ್ದು, ರೈತರನ್ನು ವಂಚಿಸಲಾಗುತ್ತಿದೆ’ ಎಂದು ಸ್ವಾಮಿ ದೂರಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅವಧಿಕಾರಿಗಳು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ರೈತರ ತೆಂಗು, ಮಾವು, ಬಾಳೆ, ಅರಿಶಿನ ಬೆಳೆಯನ್ನು ಧ್ವಂಸಗೊಳಿಸಿದ್ದಾರೆ. ಪ್ರಶ್ನಿಸಲು ಮುಂದಾದ ರೈತರನ್ನೇ ಬೆದರಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ರೈತರಿಗೆ ನ್ಯಾಯಬದ್ಧ ಪರಿಹಾರ ಒದಗಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ರೈತ ಕೃಷಿ ಕಾರ್ಮಿಕ ಸಂಘಟನೆಯ ಎಚ್.ಪಿ.ಶಿವಪ್ರಕಾಶ್, ಯೋಜನೆಯಿಂದ ಬಾಧಿತಗೊಂಡ ರೈತರಾದ ಮಂಜು, ದಿನೇಶ್, ಮಲ್ಲಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>