<p><strong>ಮೈಸೂರು</strong>: ‘ರಾಜ್ಯ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ (ವಿಐಪಿ) ಪ್ರವೇಶಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಮೋಹನ್ಕುಮಾರ್ ಬಿ.ಕೆ. ತಿಳಿಸಿದರು.</p><p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯ, ರಾಜಕೀಯ ಪ್ರಾತಿನಿಧ್ಯದ ಕೊರತೆಯನ್ನು ಮನದಟ್ಟು ಮಾಡಿಕೊಡಲಾಗುವುದು. ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷ ಮುನ್ನಡೆಸಲಾಗುವುದು’ ಎಂದು ಹೇಳಿದರು.</p><p>‘ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮುಖ್ಯ ಮತದಾರರು. ಈ ಸಮಾಜಗಳ ಜನಸಂಖ್ಯೆ 60ಲಕ್ಷದಿಂದ 70 ಲಕ್ಷದಷ್ಟಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಇದ್ದರೂ, ಶಾಸನಸಭೆಯಲ್ಲಿ ನಮ್ಮ ಸಮಾಜದ ಒಬ್ಬ ಶಾಸಕರೂ ಇಲ್ಲ. ಇದು ಅತ್ಯಂತ ನೋವಿನ ಸಂಗತಿ’ ಎಂದರು.</p><p>‘ದಶಕಗಳಿಂದಲೂ ಮೂರೂ ರಾಜಕೀಯ ಪಕ್ಷಗಳು ಹಿಂದುಳಿದ ಸಮಾಜಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡು, ಅಧಿಕಾರ ಸಿಕ್ಕ ನಂತರ ನಿರ್ಲಕ್ಷಿಸುತ್ತಿವೆ. ಪ್ರಬಲ ಸಮುದಾಯಗಳು ಮಾತ್ರ ಅಧಿಕಾರದ ಪಾಲು ಹಂಚಿಕೊಳ್ಳುತ್ತಿದ್ದು, ಅತಿ ಹಿಂದುಳಿದ ಹಾಗೂ ಅಲೆಮಾರಿ ಸಮಾಜಗಳನ್ನು ಮೂಲೆಗುಂಪು ಮಾಡಲಾಗಿದೆ’ ಎಂದು ದೂರಿದರು.</p><p>‘ಅಹಿಂದ ಹೆಸರಿನಲ್ಲಿ ಅಧಿಕಾರ ಹಿಡಿದವರು ಆ ವರ್ಗಗಳಿಗೆ ಏನು ಅನುಕೂಲ ಕಲ್ಪಿಸಿದ್ದಾರೆ. ಅಧಿಕಾರದಿಂದ ಕೆಳಗಿಳಿಯುತ್ತಿರುವ ಅಹಿಂದ ನಾಯಕರಿಗೆ ನೋವಾಗುತ್ತಿರಬಹುದು. ಆದರೆ, ದಶಕಗಳಿಂದ ಅಧಿಕಾರ ವಂಚಿತರಾದ ನೂರಾರು ಸಮಾಜಗಳ ನೋವು ಅದಕ್ಕಿಂತಲೂ ದೊಡ್ಡದು’ ಎಂದರು.</p><p>‘ಜೂನ್ 7ರಂದು ಬೆಂಗಳೂರಿನ ಅಶೋಕ ಹೋಟೆಲ್ನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರಾಜ್ಯ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ (ವಿಐಪಿ) ಪ್ರವೇಶಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಮೋಹನ್ಕುಮಾರ್ ಬಿ.ಕೆ. ತಿಳಿಸಿದರು.</p><p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯ, ರಾಜಕೀಯ ಪ್ರಾತಿನಿಧ್ಯದ ಕೊರತೆಯನ್ನು ಮನದಟ್ಟು ಮಾಡಿಕೊಡಲಾಗುವುದು. ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷ ಮುನ್ನಡೆಸಲಾಗುವುದು’ ಎಂದು ಹೇಳಿದರು.</p><p>‘ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮುಖ್ಯ ಮತದಾರರು. ಈ ಸಮಾಜಗಳ ಜನಸಂಖ್ಯೆ 60ಲಕ್ಷದಿಂದ 70 ಲಕ್ಷದಷ್ಟಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಇದ್ದರೂ, ಶಾಸನಸಭೆಯಲ್ಲಿ ನಮ್ಮ ಸಮಾಜದ ಒಬ್ಬ ಶಾಸಕರೂ ಇಲ್ಲ. ಇದು ಅತ್ಯಂತ ನೋವಿನ ಸಂಗತಿ’ ಎಂದರು.</p><p>‘ದಶಕಗಳಿಂದಲೂ ಮೂರೂ ರಾಜಕೀಯ ಪಕ್ಷಗಳು ಹಿಂದುಳಿದ ಸಮಾಜಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡು, ಅಧಿಕಾರ ಸಿಕ್ಕ ನಂತರ ನಿರ್ಲಕ್ಷಿಸುತ್ತಿವೆ. ಪ್ರಬಲ ಸಮುದಾಯಗಳು ಮಾತ್ರ ಅಧಿಕಾರದ ಪಾಲು ಹಂಚಿಕೊಳ್ಳುತ್ತಿದ್ದು, ಅತಿ ಹಿಂದುಳಿದ ಹಾಗೂ ಅಲೆಮಾರಿ ಸಮಾಜಗಳನ್ನು ಮೂಲೆಗುಂಪು ಮಾಡಲಾಗಿದೆ’ ಎಂದು ದೂರಿದರು.</p><p>‘ಅಹಿಂದ ಹೆಸರಿನಲ್ಲಿ ಅಧಿಕಾರ ಹಿಡಿದವರು ಆ ವರ್ಗಗಳಿಗೆ ಏನು ಅನುಕೂಲ ಕಲ್ಪಿಸಿದ್ದಾರೆ. ಅಧಿಕಾರದಿಂದ ಕೆಳಗಿಳಿಯುತ್ತಿರುವ ಅಹಿಂದ ನಾಯಕರಿಗೆ ನೋವಾಗುತ್ತಿರಬಹುದು. ಆದರೆ, ದಶಕಗಳಿಂದ ಅಧಿಕಾರ ವಂಚಿತರಾದ ನೂರಾರು ಸಮಾಜಗಳ ನೋವು ಅದಕ್ಕಿಂತಲೂ ದೊಡ್ಡದು’ ಎಂದರು.</p><p>‘ಜೂನ್ 7ರಂದು ಬೆಂಗಳೂರಿನ ಅಶೋಕ ಹೋಟೆಲ್ನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>