<p><strong>ಮೈಸೂರು</strong>: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.</p>.<p>ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ಸಣ್ಣ ಉದ್ಯಮ ಕೈಗೊಳ್ಳಲು ಕನಿಷ್ಠ ₹1 ಲಕ್ಷ ಘಟಕ ವೆಚ್ಚಕ್ಕೆ ₹20ಸಾವಿರ ಸಹಾಯಧನ ಹಾಗೂ ಗರಿಷ್ಠ ₹2 ಲಕ್ಷ ಘಟಕ ವೆಚ್ಚಕ್ಕೆ ₹40ಸಾವಿರ ಸಹಾಯಧನ ದೊರೆಯಲಿದೆ. ಉಳಿಕೆ ಸಾಲದ ಮೊತ್ತಕ್ಕೆ ಶೇ.4ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುತ್ತದೆ.</p>.<p>ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮಹಿಳೆಯರಿಗೆ ಶೇ33, ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಸಿಗಲಿದೆ. </p>.<p>ಅರ್ಜಿಯನ್ನು www.ksbdb.karnataka.gov.in ಜಾಲತಾಣದಲ್ಲಿ ಪಡೆದು, ಅ. 31ರ ಒಳಗೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್), ಆಧಾರ್ ಕಾರ್ಡ್ ಮೊದಲಾದ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 88616 46939 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಕೆ.ನಾರಾಯಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನಲ್ಲಿ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.</p>.<p>ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ಸಣ್ಣ ಉದ್ಯಮ ಕೈಗೊಳ್ಳಲು ಕನಿಷ್ಠ ₹1 ಲಕ್ಷ ಘಟಕ ವೆಚ್ಚಕ್ಕೆ ₹20ಸಾವಿರ ಸಹಾಯಧನ ಹಾಗೂ ಗರಿಷ್ಠ ₹2 ಲಕ್ಷ ಘಟಕ ವೆಚ್ಚಕ್ಕೆ ₹40ಸಾವಿರ ಸಹಾಯಧನ ದೊರೆಯಲಿದೆ. ಉಳಿಕೆ ಸಾಲದ ಮೊತ್ತಕ್ಕೆ ಶೇ.4ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುತ್ತದೆ.</p>.<p>ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮಹಿಳೆಯರಿಗೆ ಶೇ33, ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಸಿಗಲಿದೆ. </p>.<p>ಅರ್ಜಿಯನ್ನು www.ksbdb.karnataka.gov.in ಜಾಲತಾಣದಲ್ಲಿ ಪಡೆದು, ಅ. 31ರ ಒಳಗೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್), ಆಧಾರ್ ಕಾರ್ಡ್ ಮೊದಲಾದ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 88616 46939 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಕೆ.ನಾರಾಯಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>