<p><strong>ಮೈಸೂರು</strong>: ‘ರಾಷ್ಟ್ರಕವಿ ಕುವೆಂಪು ವಿಶ್ವಮಾನವ ಸಂದೇಶ ಪಸರಿಸಲು ಡಿ.29ರಂದು ಬನ್ನೂರು ಹೋಬಳಿಯ ಯಾಚೇನಹಳ್ಳಿ ಶ್ರೀರಾಮಕೃಷ್ಣ ಸೇವಾ ಕೇಂದ್ರದ ಶಾಲಾ ಆವರಣದಲ್ಲಿ ‘ವಿಶ್ವಮಾನವ ಧರ್ಮದ ಮೊದಲ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾದಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವಮಾನವ ತತ್ವದ ಅಡಿಯಲ್ಲಿ ಕುವೆಂಪು ಆಶಯ ಮುನ್ನೆಲೆಗೆ ತರಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 10ಕ್ಕೆ ಕುವೆಂಪು ಭಾವಚಿತ್ರ ಮೆರವಣಿಗೆ ನಡೆಯಲಿದ್ದು, 11ಕ್ಕೆ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಅತಿಥಿಗಳಾಗಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್, ಚಂದ್ರಶೇಖರ್ ನಂಗಲಿ ಭಾಗವಹಿಸುವರು’ ಎಂದು ತಿಳಿಸಿದರು.</p>.<p>‘ದೇವರು, ಧರ್ಮದ ಹೆಸರಿನಲ್ಲಿ ಜನರಲ್ಲಿ ಮೌಢ್ಯ ತುಂಬಿ ದಾರಿ ತಪ್ಪಿಸುವುದನ್ನು ಹೋಗಲಾಡಿಸಲು ವಿಶ್ವಮಾನವ ಧರ್ಮ ಪರ್ಯಾಯ ಮಾರ್ಗವಾಗಿದೆ. ಕೇಂದ್ರ ಸರ್ಕಾರ ನಡೆಸಲಿರುವ ಗಣತಿ ವೇಳೆ ವಿಶ್ವಮಾನವ ಧರ್ಮಕ್ಕೆ ಮಾನ್ಯತೆ ಕೊಡುವಂತೆ ಮನವಿ ಮಾಡಲು ಈ ಅಧಿವೇಶನ ನೆರವಾಗಲಿದೆ’ ಎಂದರು.</p>.<p>ಪ್ರಗತಿಪರ ಚಿಂತಕ ವೈ.ಎನ್.ಶಂಕರೇಗೌಡ ಮಾತನಾಡಿ, ‘ಮಂತ್ರಮಾಂಗಲ್ಯ ಆಶಯದಲ್ಲಿ ಸರಳ ವಿವಾಹ ಆಗುವವರಿಗೆ ಯಾಚೇನಹಳ್ಳಿ ಕೇಂದ್ರ ವೇದಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>ವಿಶ್ವಮಾನವ ಧರ್ಮದ ಮೊದಲ ಅಧಿವೇಶನ ಸ್ವಾಗತ ಸಮಿತಿ ಸಂಚಾಲಕ ಚಂದ್ರಶೇಖರ್ ದ.ಕೋ.ಹಳ್ಳಿ ಮಾತನಾಡಿ, ‘ಕ್ರಿಶ್ಚಿಯನ್, ಇಸ್ಲಾಂ, ಬೌದ್ಧ ಧರ್ಮಗಳ ಗುರುಗಳನ್ನು ಆಹ್ವಾನಿಸಲಾಗಿದೆ. ಜಾತ್ಯತೀತವಾಗಿ ಈ ಕಾರ್ಯಕ್ರಮ ರೂಪುಗೊಂಡಿದೆ. ನಾಡಿನಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p>.<p>ಕನ್ನಡ ಉಪನ್ಯಾಸಕ ಉಮೇಶ್ ದಡಮಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರಾಷ್ಟ್ರಕವಿ ಕುವೆಂಪು ವಿಶ್ವಮಾನವ ಸಂದೇಶ ಪಸರಿಸಲು ಡಿ.29ರಂದು ಬನ್ನೂರು ಹೋಬಳಿಯ ಯಾಚೇನಹಳ್ಳಿ ಶ್ರೀರಾಮಕೃಷ್ಣ ಸೇವಾ ಕೇಂದ್ರದ ಶಾಲಾ ಆವರಣದಲ್ಲಿ ‘ವಿಶ್ವಮಾನವ ಧರ್ಮದ ಮೊದಲ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾದಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವಮಾನವ ತತ್ವದ ಅಡಿಯಲ್ಲಿ ಕುವೆಂಪು ಆಶಯ ಮುನ್ನೆಲೆಗೆ ತರಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 10ಕ್ಕೆ ಕುವೆಂಪು ಭಾವಚಿತ್ರ ಮೆರವಣಿಗೆ ನಡೆಯಲಿದ್ದು, 11ಕ್ಕೆ ಕಾರ್ಯಕ್ರಮ ಉದ್ಘಾಟಿಸಲಾಗುವುದು. ಅತಿಥಿಗಳಾಗಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್, ಚಂದ್ರಶೇಖರ್ ನಂಗಲಿ ಭಾಗವಹಿಸುವರು’ ಎಂದು ತಿಳಿಸಿದರು.</p>.<p>‘ದೇವರು, ಧರ್ಮದ ಹೆಸರಿನಲ್ಲಿ ಜನರಲ್ಲಿ ಮೌಢ್ಯ ತುಂಬಿ ದಾರಿ ತಪ್ಪಿಸುವುದನ್ನು ಹೋಗಲಾಡಿಸಲು ವಿಶ್ವಮಾನವ ಧರ್ಮ ಪರ್ಯಾಯ ಮಾರ್ಗವಾಗಿದೆ. ಕೇಂದ್ರ ಸರ್ಕಾರ ನಡೆಸಲಿರುವ ಗಣತಿ ವೇಳೆ ವಿಶ್ವಮಾನವ ಧರ್ಮಕ್ಕೆ ಮಾನ್ಯತೆ ಕೊಡುವಂತೆ ಮನವಿ ಮಾಡಲು ಈ ಅಧಿವೇಶನ ನೆರವಾಗಲಿದೆ’ ಎಂದರು.</p>.<p>ಪ್ರಗತಿಪರ ಚಿಂತಕ ವೈ.ಎನ್.ಶಂಕರೇಗೌಡ ಮಾತನಾಡಿ, ‘ಮಂತ್ರಮಾಂಗಲ್ಯ ಆಶಯದಲ್ಲಿ ಸರಳ ವಿವಾಹ ಆಗುವವರಿಗೆ ಯಾಚೇನಹಳ್ಳಿ ಕೇಂದ್ರ ವೇದಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>ವಿಶ್ವಮಾನವ ಧರ್ಮದ ಮೊದಲ ಅಧಿವೇಶನ ಸ್ವಾಗತ ಸಮಿತಿ ಸಂಚಾಲಕ ಚಂದ್ರಶೇಖರ್ ದ.ಕೋ.ಹಳ್ಳಿ ಮಾತನಾಡಿ, ‘ಕ್ರಿಶ್ಚಿಯನ್, ಇಸ್ಲಾಂ, ಬೌದ್ಧ ಧರ್ಮಗಳ ಗುರುಗಳನ್ನು ಆಹ್ವಾನಿಸಲಾಗಿದೆ. ಜಾತ್ಯತೀತವಾಗಿ ಈ ಕಾರ್ಯಕ್ರಮ ರೂಪುಗೊಂಡಿದೆ. ನಾಡಿನಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p>.<p>ಕನ್ನಡ ಉಪನ್ಯಾಸಕ ಉಮೇಶ್ ದಡಮಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>