<p>ಮೈಸೂರು: ‘ಸ್ವಾಮಿ ವಿವೇಕಾನಂದರಿಗೆ ಚಿಕ್ಕಂದಿನಲ್ಲೇ ಸಂಗೀತದಲ್ಲಿ ಪ್ರೌಢಿಮೆ ಇತ್ತು. ಪಕ್ಕವಾದ್ಯಗಳನ್ನು ಚೆನ್ನಾಗಿ ನುಡಿಸುತ್ತಿದ್ದರು. ಸಂಗೀತಕ್ಕೆ ಜೀವ ಬರುವಂತೆ ಭಾವಭಕ್ತಿಯಿಂದ ಹಾಡುತ್ತಿದ್ದರು’ ಎಂದು ರಾಮಕೃಷ್ಣ ಆಶ್ರಮದ ಸ್ವಾಮಿ ಸರ್ವ ಜಯಾನಂದ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿವೇಕಾನಂದರು ‘ಸಂಗೀತ ಕಲ್ಪತರು’ ಎಂಬ ಕೃತಿಯನ್ನು ಬೆಂಗಾಳಿ ಭಾಷೆಯಲ್ಲಿ ರಚಿಸಿದ್ದರು. ಅವರ ಹಾಡು ಕೇಳಿ ರಾಮಕೃಷ್ಣ ಪರಮಹಂಸರು ಭಾವಸಮಾಧಿಗೆ ಹೋಗುತ್ತಿದ್ದರು. ವಿವೇಕಾನಂದರಿಗೆ ಇತಿಹಾಸ, ವಿಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳ ಬಗ್ಗೆ ಆಳವಾದ ಜ್ಞಾನವಿತ್ತು’ ಎಂದು ಹೇಳಿದರು.</p>.<p>‘ಸಂಗೀತ ಎನ್ನುವುದು ಗಿಮಿಕ್ ಅಲ್ಲ. ಕಂಠವನ್ನು ಇಟ್ಟುಕೊಂಡು ಮಾಡುವ ಸರ್ಕಸ್ ಅಲ್ಲ. ಸಂಗೀತಕ್ಕೆ ಭಾವವಿದೆ. ದಿವ್ಯತೆಗೆ ಕೊಂಡೊಯ್ಯುವ ಶಕ್ತಿ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದೇಶಿ ಪ್ರಜೆಗಳಿಗೆ ದೇಶಪ್ರೇಮ ಹೆಚ್ಚು. ಆದರೆ, ನಮ್ಮಲ್ಲಿ ದೇಶಪ್ರೇಮದ ಕೊರತೆ ಇದೆ. ಧರ್ಮ ಮತ್ತು ಅಧ್ಯಾತ್ಮವನ್ನು ನಿರ್ಲಕ್ಷಿಸಬಾರದು. ಎಲ್ಲ ಧರ್ಮಗಳು ಸನಾತನ ಧರ್ಮದ ಮುಖಗಳು. ಹೀಗಾಗಿ, ಭಾರತದ ಸಂಸ್ಕೃತಿಯ ಘನತೆಯನ್ನು ಎತ್ತಿಹಿಡಿಯಬೇಕು’ ಎಂದು ಸಲಹೆ ನೀಡಿದರು.</p>.<p>ಸಂಗೀತ ವಿ.ವಿ ಕುಲಪತಿ ಪ್ರೊ.ನಾಗೇಶ ವಿ. ಬೆಟ್ಟಕೋಟೆ ಮಾತನಾಡಿ, ‘ನಿಮ್ಮ ಜೀವನವನ್ನು ಕಟ್ಟಿಕೊಳ್ಳಲು ನಿಮ್ಮಿಂದ ಮಾತ್ರ ಸಾಧ್ಯ. ಹೀಗಾಗಿ, ಅನ್ಯರ ಮಾತಿಗೆ ಕಿವಿಗೊಡದೆ ಸನ್ಮಾರ್ಗದಲ್ಲಿ ಸಾಗಬೇಕು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹಣಕಾಸು ಅಧಿಕಾರಿ ರೇಣುಕಾಂಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸ್ವಾಮಿ ವಿವೇಕಾನಂದರಿಗೆ ಚಿಕ್ಕಂದಿನಲ್ಲೇ ಸಂಗೀತದಲ್ಲಿ ಪ್ರೌಢಿಮೆ ಇತ್ತು. ಪಕ್ಕವಾದ್ಯಗಳನ್ನು ಚೆನ್ನಾಗಿ ನುಡಿಸುತ್ತಿದ್ದರು. ಸಂಗೀತಕ್ಕೆ ಜೀವ ಬರುವಂತೆ ಭಾವಭಕ್ತಿಯಿಂದ ಹಾಡುತ್ತಿದ್ದರು’ ಎಂದು ರಾಮಕೃಷ್ಣ ಆಶ್ರಮದ ಸ್ವಾಮಿ ಸರ್ವ ಜಯಾನಂದ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿವೇಕಾನಂದರು ‘ಸಂಗೀತ ಕಲ್ಪತರು’ ಎಂಬ ಕೃತಿಯನ್ನು ಬೆಂಗಾಳಿ ಭಾಷೆಯಲ್ಲಿ ರಚಿಸಿದ್ದರು. ಅವರ ಹಾಡು ಕೇಳಿ ರಾಮಕೃಷ್ಣ ಪರಮಹಂಸರು ಭಾವಸಮಾಧಿಗೆ ಹೋಗುತ್ತಿದ್ದರು. ವಿವೇಕಾನಂದರಿಗೆ ಇತಿಹಾಸ, ವಿಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳ ಬಗ್ಗೆ ಆಳವಾದ ಜ್ಞಾನವಿತ್ತು’ ಎಂದು ಹೇಳಿದರು.</p>.<p>‘ಸಂಗೀತ ಎನ್ನುವುದು ಗಿಮಿಕ್ ಅಲ್ಲ. ಕಂಠವನ್ನು ಇಟ್ಟುಕೊಂಡು ಮಾಡುವ ಸರ್ಕಸ್ ಅಲ್ಲ. ಸಂಗೀತಕ್ಕೆ ಭಾವವಿದೆ. ದಿವ್ಯತೆಗೆ ಕೊಂಡೊಯ್ಯುವ ಶಕ್ತಿ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದೇಶಿ ಪ್ರಜೆಗಳಿಗೆ ದೇಶಪ್ರೇಮ ಹೆಚ್ಚು. ಆದರೆ, ನಮ್ಮಲ್ಲಿ ದೇಶಪ್ರೇಮದ ಕೊರತೆ ಇದೆ. ಧರ್ಮ ಮತ್ತು ಅಧ್ಯಾತ್ಮವನ್ನು ನಿರ್ಲಕ್ಷಿಸಬಾರದು. ಎಲ್ಲ ಧರ್ಮಗಳು ಸನಾತನ ಧರ್ಮದ ಮುಖಗಳು. ಹೀಗಾಗಿ, ಭಾರತದ ಸಂಸ್ಕೃತಿಯ ಘನತೆಯನ್ನು ಎತ್ತಿಹಿಡಿಯಬೇಕು’ ಎಂದು ಸಲಹೆ ನೀಡಿದರು.</p>.<p>ಸಂಗೀತ ವಿ.ವಿ ಕುಲಪತಿ ಪ್ರೊ.ನಾಗೇಶ ವಿ. ಬೆಟ್ಟಕೋಟೆ ಮಾತನಾಡಿ, ‘ನಿಮ್ಮ ಜೀವನವನ್ನು ಕಟ್ಟಿಕೊಳ್ಳಲು ನಿಮ್ಮಿಂದ ಮಾತ್ರ ಸಾಧ್ಯ. ಹೀಗಾಗಿ, ಅನ್ಯರ ಮಾತಿಗೆ ಕಿವಿಗೊಡದೆ ಸನ್ಮಾರ್ಗದಲ್ಲಿ ಸಾಗಬೇಕು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹಣಕಾಸು ಅಧಿಕಾರಿ ರೇಣುಕಾಂಬ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>