ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರ್ಮಾಣ ಕಾರ್ಮಿಕರ ಜೀವನೋಪಾಯದ ಮೇಲೆ ಕಳೆದ ಹತ್ತು ವರ್ಷಗಳಿಂದ ವ್ಯವಸ್ಥಿತ ದಾಳಿ ಮಾಡಿದೆ. ನೋಟು ಅಮಾನ್ಯೀಕರಣ, ಜಿಎಸ್ಟಿ, ಕೋವಿಡ್ ಲಾಕ್ಡೌನ್ಗಳಿಂದ ಕಾರ್ಮಿಕರ ಉದ್ಯೋಗ ನಷ್ಟ, ಹಸಿವು, ಅಭದ್ರತೆ ಮತ್ತು ಪ್ರಾಣಹಾನಿಗೆ ಕಾರಣವಾಗಿದೆ’ ಎಂದು ಆರೋಪಿಸಿದರು.