<p><strong>ಮೈಸೂರು</strong>: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಬಡ ವಿದ್ಯಾರ್ಥಿಗಳಿಗೆಂದು ‘ವಿದ್ಯಾನಿಧಿ’ ಯೋಜನೆ ಆರಂಭಿಸಲಾಗಿದ್ದು, ಈವರೆಗೆ ₹ 60 ಲಕ್ಷ ಸಂಗ್ರಹವಾಗಿದೆ’ ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ತಿಳಿಸಿದರು.</p>.<p>‘ವಾರ್ಷಿಕ ₹ 35ಸಾವಿರ ಪಾವತಿಸಲು ಸಾಧ್ಯವಾಗದ ಬಹಳಷ್ಟು ವಿದ್ಯಾರ್ಥಿಗಳು ಸಹಾಯ ಕೋರಿ ನನ್ನ ಬಳಿಗೆ ಬರುತ್ತಾರೆ. ಅಂಥವರ ನೆರವಿಗಾಗಿ ವಿದ್ಯಾನಿಧಿ ಆರಂಭಿಸಿದ್ದೇನೆ. ವಂತಿಗೆ ಸಂಗ್ರಹದ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಭರಿಸಲಾಗುವುದು’ ಎಂದು ಹೇಳಿದರು.</p>.<p>‘2030ರ ವೇಳೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳಾಗಲಿವೆ. ಎಐ (ಕೃತಕ ಬುದ್ಧಿಮತ್ತೆ) ದಾಂಗುಡಿ ಇಟ್ಟಿರುವ ಪರಿಣಾಮ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ಕಲಿಯಬೇಕು. ಎಐ ಮಾನವನ ಬುದ್ಧಿಮತ್ತೆ ಮೀರಿ ಮುಂದೆ ಸಾಗುತ್ತಿದೆ. ಎಐ ನಿಯಂತ್ರಿಸಲು ಎಎಸ್ಐ( ಆರ್ಟಿಫಿಶಿಯಲ್ ಸೂಪರ್ ಇಂಟಲಿಜೆನ್ಸ್) ಬರಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ದಲ್ಲಿ ಬಡ ವಿದ್ಯಾರ್ಥಿಗಳಿಗೆಂದು ‘ವಿದ್ಯಾನಿಧಿ’ ಯೋಜನೆ ಆರಂಭಿಸಲಾಗಿದ್ದು, ಈವರೆಗೆ ₹ 60 ಲಕ್ಷ ಸಂಗ್ರಹವಾಗಿದೆ’ ಎಂದು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ತಿಳಿಸಿದರು.</p>.<p>‘ವಾರ್ಷಿಕ ₹ 35ಸಾವಿರ ಪಾವತಿಸಲು ಸಾಧ್ಯವಾಗದ ಬಹಳಷ್ಟು ವಿದ್ಯಾರ್ಥಿಗಳು ಸಹಾಯ ಕೋರಿ ನನ್ನ ಬಳಿಗೆ ಬರುತ್ತಾರೆ. ಅಂಥವರ ನೆರವಿಗಾಗಿ ವಿದ್ಯಾನಿಧಿ ಆರಂಭಿಸಿದ್ದೇನೆ. ವಂತಿಗೆ ಸಂಗ್ರಹದ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಭರಿಸಲಾಗುವುದು’ ಎಂದು ಹೇಳಿದರು.</p>.<p>‘2030ರ ವೇಳೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳಾಗಲಿವೆ. ಎಐ (ಕೃತಕ ಬುದ್ಧಿಮತ್ತೆ) ದಾಂಗುಡಿ ಇಟ್ಟಿರುವ ಪರಿಣಾಮ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ಕಲಿಯಬೇಕು. ಎಐ ಮಾನವನ ಬುದ್ಧಿಮತ್ತೆ ಮೀರಿ ಮುಂದೆ ಸಾಗುತ್ತಿದೆ. ಎಐ ನಿಯಂತ್ರಿಸಲು ಎಎಸ್ಐ( ಆರ್ಟಿಫಿಶಿಯಲ್ ಸೂಪರ್ ಇಂಟಲಿಜೆನ್ಸ್) ಬರಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>