ಹುಲಿ ಅರಣ್ಯ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಂಬಂಧ 15 ಕಿ.ಮಿ. ಮ್ಯಾರಥಾನ್ ಹಮ್ಮಿಕೊಳ್ಳಲಾಗಿದ್ದು, ಈ ಓಟವನ್ನು ಕಾಕನಕೋಟೆ ಸಫಾರಿ ಕೇಂದ್ರ ದಮ್ಮನಕಟ್ಟೆಯಲ್ಲಿ ಎಚ್.ಡಿ.ಕೋಟೆ ಶಾಸಕರಾದ ಅನಿಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಬಿ.ವಿ.ರಂಗರಾವ್ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಹುಲಿ ಯೋಜನೆ, ಕಮಲ ಕರಿಕಾಳನ್ ಕೊಡಗು ಅರಣ್ಯ ಸಂರಕ್ಷಣಾಧಿಕಾರಿ, ಕುತಿಕಾ ಆಲನಹಳ್ಳಿ ಗೌರವ ವನ್ಯಜೀವಿ ಪರಿಪಾಲಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.