ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತೆಯರ ಪರ ಮಾತನಾಡದ ಕುಮಾರಸ್ವಾಮಿ ಅವರು ಕೆಳಮಟ್ಟದ ರಾಜಕಾರಣದಲ್ಲಿ ತೊಡಗಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ, ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹಾಗೂ ಪೊಲೀಸರಿಗೆ ಶರಣಾಗುವಂತೆ ಪ್ರಜ್ವಲ್ಗೆ ಸೂಚಿಸಲಿ’ ಎಂದು ಆಗ್ರಹಿಸಿದರು.