ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಅಪಾರ ಭಕ್ತರ ಸಮ್ಮುಖದಲ್ಲಿ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನೆರವೇರಿತು. ಗ್ರಾಮದ ಕರ್ತೃ ಗದ್ದುಗೆ ಆವರಣದಲ್ಲಿ ಜಮಾಯಿಸಿದ್ದ ಭಕ್ತರು ಹೆಬ್ಬಾವಿನ ಗಾತ್ರದ ರಥದ ಮಿಣಿಯನ್ನು ಎಳೆದು ಹರಕೆ ತೀರಿಸಿದರು. ರಥಕ್ಕೆ ಹಣ್ಣು-ಜವನ ಎಸೆದು ನಮಿಸಿದರು. ಹರಕೆ ಕಾರ್ಯ ನೆರವೇರಿಸಿದ ಸಂತೃಪ್ತಿ ಅವರಲ್ಲಿ ಮೂಡಿತ್ತು.