<p><strong>ಮೈಸೂರು</strong>: ತಾಲ್ಲೂಕಿನ ವರುಣ ಕೆರೆಯಲ್ಲಿ ಜಲ ಸಾಹಸ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.</p><p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲಾಡಳಿತ ಹಾಶಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಜಲಸಾಹಸ ಚಟುವಟಿಕೆಗಳು ಇರುವುದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಕೆರೆಯಲ್ಲಿನ ಹೂಳು ತೆರವು, ಬೇಲಿ ನಿರ್ಮಾಣ, ವಾಹನ ನಿಲುಗಡೆ ಪ್ರದೇಶ ಅಭಿವೃದ್ಧಿ, ಕೆರೆಗೆ ಸೇರುತ್ತಿರುವ ಕಲುಷಿತ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಲು ನೈಸರ್ಗಿಕ ಜೈವಿಕ ವ್ಯವಸ್ಥೆ (ಎನ್ಬಿಎಸ್) ಅಳವಡಿಸಲು ಕ್ರಮ ವಹಿಸಲಾಗಿದೆ. ಈ ತಾಂತ್ರಿಕ ಕಾಮಗಾರಿಗಳನ್ನು ಸುಗಮವಾಗಿ ನಡೆಸಲು ಕೆರೆಯಲ್ಲಿನ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡುವುದು ಅಗತ್ಯವಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಸಿವಿಲ್ ಕಾಮಗಾರಿಗಳು ಪೂರ್ಣಗೊಂಡ ನಂತರ ಜಲಸಾಹಸ ಚಟುವಟಿಕೆಗಳನ್ನು ಪುನರಾರಂಭಿಸಲಾಗುವುದು. ಕೆರೆಯನ್ನು ಮತ್ತಷ್ಟು ಆಕರ್ಷಕವಾಗಿಸಲು, ಪ್ರವಾಸಿಗರನ್ನು ಸೆಳೆಯಲು ಹಾಗೂ ಪರಿಸರ ಸ್ನೇಹಿಯಾಗಿ ರೂಪಿಸಲು ಈ ಅಭಿವೃದ್ಧಿ ಕ್ರಮವನ್ನು ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>ಈ ಕೆರೆಯಲ್ಲಿ ಮೆ:ಔಟ್ಬ್ಯಾಂಕ್ ಅಡ್ವೆಂಚರ್ಸ್ ವರುಣ ವರಿಯಿಂದ ಬೋಟಿಂಗ್ ಮೊದಲಾದ ಜಲ ಸಾಹಸ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು. ರಜಾ ದಿನ, ವಾರಾಂತ್ಯದಲ್ಲಿ ಬಹಳಷ್ಟು ಜನರು ಬರುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ತಾಲ್ಲೂಕಿನ ವರುಣ ಕೆರೆಯಲ್ಲಿ ಜಲ ಸಾಹಸ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.</p><p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲಾಡಳಿತ ಹಾಶಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಜಲಸಾಹಸ ಚಟುವಟಿಕೆಗಳು ಇರುವುದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಕೆರೆಯಲ್ಲಿನ ಹೂಳು ತೆರವು, ಬೇಲಿ ನಿರ್ಮಾಣ, ವಾಹನ ನಿಲುಗಡೆ ಪ್ರದೇಶ ಅಭಿವೃದ್ಧಿ, ಕೆರೆಗೆ ಸೇರುತ್ತಿರುವ ಕಲುಷಿತ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಲು ನೈಸರ್ಗಿಕ ಜೈವಿಕ ವ್ಯವಸ್ಥೆ (ಎನ್ಬಿಎಸ್) ಅಳವಡಿಸಲು ಕ್ರಮ ವಹಿಸಲಾಗಿದೆ. ಈ ತಾಂತ್ರಿಕ ಕಾಮಗಾರಿಗಳನ್ನು ಸುಗಮವಾಗಿ ನಡೆಸಲು ಕೆರೆಯಲ್ಲಿನ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡುವುದು ಅಗತ್ಯವಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಸಿವಿಲ್ ಕಾಮಗಾರಿಗಳು ಪೂರ್ಣಗೊಂಡ ನಂತರ ಜಲಸಾಹಸ ಚಟುವಟಿಕೆಗಳನ್ನು ಪುನರಾರಂಭಿಸಲಾಗುವುದು. ಕೆರೆಯನ್ನು ಮತ್ತಷ್ಟು ಆಕರ್ಷಕವಾಗಿಸಲು, ಪ್ರವಾಸಿಗರನ್ನು ಸೆಳೆಯಲು ಹಾಗೂ ಪರಿಸರ ಸ್ನೇಹಿಯಾಗಿ ರೂಪಿಸಲು ಈ ಅಭಿವೃದ್ಧಿ ಕ್ರಮವನ್ನು ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>ಈ ಕೆರೆಯಲ್ಲಿ ಮೆ:ಔಟ್ಬ್ಯಾಂಕ್ ಅಡ್ವೆಂಚರ್ಸ್ ವರುಣ ವರಿಯಿಂದ ಬೋಟಿಂಗ್ ಮೊದಲಾದ ಜಲ ಸಾಹಸ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು. ರಜಾ ದಿನ, ವಾರಾಂತ್ಯದಲ್ಲಿ ಬಹಳಷ್ಟು ಜನರು ಬರುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>