<p><strong>ಮೈಸೂರು:</strong> ‘ನಾವು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ವನ್ನು ಟಾರ್ಗೆಟ್ ಮಾಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಾವುದೇ ಸಂಘ–ಸಂಸ್ಥೆಯಾಗಲಿ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಮುನ್ನ ಅನುಮತಿ ಪಡೆಯಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಇದ್ದಾಗಲೇ ಆ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಅದನ್ನು ಈಗ ನಾವು ಅನುಷ್ಠಾನಕ್ಕೆ ತಂದಿದ್ದೇವಷ್ಟೆ. ಅವರು ಕ್ರಮ ಕೈಗೊಂಡಿದ್ದಾಗ ಆರ್ಎಸ್ಎಸ್ನವರು ಏಕೆ ವಿರೋಧಿಸಲಿಲ್ಲ?’ ಎಂದು ಕೇಳಿದರು.</p><p>‘ಈ ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ಜನತೆ, ಬಡವರ ಕೆಲಸವನ್ನು ಅವರು ಮಾಡುವುದೇ ಇಲ್ಲ. ಸದಾ ರಾಜಕಾರಣದಲ್ಲಿ ತೊಡಗುವುದೇ ಅದರ ಕೆಲಸ’ ಎಂದು ದೂರಿದರು.</p><p>‘ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್ಎಸ್ಎಸ್ನವರು ಹಾಕಿದ್ದ ಬ್ಯಾನರ್, ಭಗವಾಧ್ವಜ ತೆರವುಗೊಳಿಸಿರುವುದು ನನಗೆ ಗೊತ್ತಿಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ. ಬಿಜೆಪಿಯಿಂದ ಕರ್ನಾಟಕದಲ್ಲಿ ಶಾಂತಿ ಭಂಗ ಮಾಡಲು ಸಾಧ್ಯವಿಲ್ಲ. ಪೊಲೀಸರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ’ ಎಂದರು.</p><p>‘ಕಮಿಷನ್ ಕೇಳಲಾಗುತ್ತಿದೆ’ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರನ್ನು ಕರೆಸಿ ಚರ್ಚಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾವು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ವನ್ನು ಟಾರ್ಗೆಟ್ ಮಾಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಾವುದೇ ಸಂಘ–ಸಂಸ್ಥೆಯಾಗಲಿ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡುವುದಕ್ಕೆ ಮುನ್ನ ಅನುಮತಿ ಪಡೆಯಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿ ಇದ್ದಾಗಲೇ ಆ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಅದನ್ನು ಈಗ ನಾವು ಅನುಷ್ಠಾನಕ್ಕೆ ತಂದಿದ್ದೇವಷ್ಟೆ. ಅವರು ಕ್ರಮ ಕೈಗೊಂಡಿದ್ದಾಗ ಆರ್ಎಸ್ಎಸ್ನವರು ಏಕೆ ವಿರೋಧಿಸಲಿಲ್ಲ?’ ಎಂದು ಕೇಳಿದರು.</p><p>‘ಈ ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ಜನತೆ, ಬಡವರ ಕೆಲಸವನ್ನು ಅವರು ಮಾಡುವುದೇ ಇಲ್ಲ. ಸದಾ ರಾಜಕಾರಣದಲ್ಲಿ ತೊಡಗುವುದೇ ಅದರ ಕೆಲಸ’ ಎಂದು ದೂರಿದರು.</p><p>‘ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್ಎಸ್ಎಸ್ನವರು ಹಾಕಿದ್ದ ಬ್ಯಾನರ್, ಭಗವಾಧ್ವಜ ತೆರವುಗೊಳಿಸಿರುವುದು ನನಗೆ ಗೊತ್ತಿಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ. ಬಿಜೆಪಿಯಿಂದ ಕರ್ನಾಟಕದಲ್ಲಿ ಶಾಂತಿ ಭಂಗ ಮಾಡಲು ಸಾಧ್ಯವಿಲ್ಲ. ಪೊಲೀಸರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ’ ಎಂದರು.</p><p>‘ಕಮಿಷನ್ ಕೇಳಲಾಗುತ್ತಿದೆ’ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರನ್ನು ಕರೆಸಿ ಚರ್ಚಿಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>