<p><strong>ಮೈಸೂರು: </strong>ವಿದ್ಯಾರ್ಥಿಗಳೇ ಆಗಲಿ, ಉದ್ಯೋಗಸ್ಥರೇ ಆಗಲಿ ಸಮರ್ಪಕವಾಗಿ ಒತ್ತಡ ನಿರ್ವಹಣೆ ಮಾಡಿದ್ದಲ್ಲಿ ಯಶಸ್ಸು ಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ವಿಭಾಗವು ಇಲ್ಲಿನ ಸೆನೆಟ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ‘ಯುವ ಸಬಲೀಕರಣ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಒತ್ತಡಗಳನ್ನು ನಿರ್ವಹಿಸುವ ಕೌಶಲಗಳನ್ನು ಕಲಿಯಬೇಕಿದೆ. ಪದವಿ ಮುಗಿದ ಬಳಿಕ ಉದ್ಯೋಗ ಸಿಕ್ಕಿತೆಂದು ಒಂದು ಕಡೆ ಸುಮ್ಮನೇ ಜಡವಾಗಿ ಕಾರ್ಯನಿರ್ವಹಿಸುವುದು ಸರಿಯಲ್ಲ. ಪ್ರತಿ ಉದ್ಯೋಗದಲ್ಲೂ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಆಗ ಎದುರಾಗುವ ಒತ್ತಡಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಪದವಿ ಪಡೆಯುವುದಷ್ಟೇ ಗುರಿಯಾಗಬಾರದು. ಉದ್ಯೋಗ ಪಡೆಯುವ ಕೌಶಲಗಳನ್ನು ಪಡೆಯುವ ಕುರಿತು ಆಲೋಚಿಸಿ ಅಂತಹ ಕೌಶಲಗಳನ್ನು ಪಡೆಯಬೇಕು ಎಂದರು.</p>.<p>ಪಿಎಸ್ಎಸ್ಎಂ ಗ್ಲೋಬಲ್ ಕಂಪನಿಯ ಸಂಸ್ಥಾಪಕಿ ಪಾರಿ ಪತ್ರಿ ಅವರು ‘ಒತ್ತಡ ನಿರ್ವಹಣೆ ಹಾಗೂ ಮೆಡಿಟೇಷನ್’ ಕುರಿತು ಉಪನ್ಯಾಸ ನೀಡಿದರು.</p>.<p>ಕುಲಸಚಿವ ಆರ್.ಶಿವಪ್ಪ, ಓಬಿಸಿ ಸೆಲ್ ಸಂಯೋಜಕ ಡಾ.ಬಿ.ವಿ.ಸುರೇಶ್ಕುಮಾರ್ ಹಾಗೂ ಕಾರ್ಯಾಗಾರದ ಸಂಯೋಜಕಿ ಡಾ.ನವಿತಾ ತಿಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿದ್ಯಾರ್ಥಿಗಳೇ ಆಗಲಿ, ಉದ್ಯೋಗಸ್ಥರೇ ಆಗಲಿ ಸಮರ್ಪಕವಾಗಿ ಒತ್ತಡ ನಿರ್ವಹಣೆ ಮಾಡಿದ್ದಲ್ಲಿ ಯಶಸ್ಸು ಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ವಿಭಾಗವು ಇಲ್ಲಿನ ಸೆನೆಟ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ‘ಯುವ ಸಬಲೀಕರಣ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಒತ್ತಡಗಳನ್ನು ನಿರ್ವಹಿಸುವ ಕೌಶಲಗಳನ್ನು ಕಲಿಯಬೇಕಿದೆ. ಪದವಿ ಮುಗಿದ ಬಳಿಕ ಉದ್ಯೋಗ ಸಿಕ್ಕಿತೆಂದು ಒಂದು ಕಡೆ ಸುಮ್ಮನೇ ಜಡವಾಗಿ ಕಾರ್ಯನಿರ್ವಹಿಸುವುದು ಸರಿಯಲ್ಲ. ಪ್ರತಿ ಉದ್ಯೋಗದಲ್ಲೂ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಆಗ ಎದುರಾಗುವ ಒತ್ತಡಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳಿಗೆ ಪದವಿ ಪಡೆಯುವುದಷ್ಟೇ ಗುರಿಯಾಗಬಾರದು. ಉದ್ಯೋಗ ಪಡೆಯುವ ಕೌಶಲಗಳನ್ನು ಪಡೆಯುವ ಕುರಿತು ಆಲೋಚಿಸಿ ಅಂತಹ ಕೌಶಲಗಳನ್ನು ಪಡೆಯಬೇಕು ಎಂದರು.</p>.<p>ಪಿಎಸ್ಎಸ್ಎಂ ಗ್ಲೋಬಲ್ ಕಂಪನಿಯ ಸಂಸ್ಥಾಪಕಿ ಪಾರಿ ಪತ್ರಿ ಅವರು ‘ಒತ್ತಡ ನಿರ್ವಹಣೆ ಹಾಗೂ ಮೆಡಿಟೇಷನ್’ ಕುರಿತು ಉಪನ್ಯಾಸ ನೀಡಿದರು.</p>.<p>ಕುಲಸಚಿವ ಆರ್.ಶಿವಪ್ಪ, ಓಬಿಸಿ ಸೆಲ್ ಸಂಯೋಜಕ ಡಾ.ಬಿ.ವಿ.ಸುರೇಶ್ಕುಮಾರ್ ಹಾಗೂ ಕಾರ್ಯಾಗಾರದ ಸಂಯೋಜಕಿ ಡಾ.ನವಿತಾ ತಿಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>