ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸ್ ಮಾತನಾಡಿ, ‘ಜನರು ಎಚ್ಚೆತ್ತುಕೊಳ್ಳದಿದ್ದರೆ ಹೊಸ ಸಂವಿಧಾನ ರಚಿಸಿ, ಅಂಬೇಡ್ಕರ್ ಅವರ ಹೆಸರನ್ನು ಅಳಿಸಿ ಹಾಕುತ್ತಾರೆ. ವಿನೀತರಾಗಿ ಕೈಮುಗಿಯುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಆ ರೀತಿ ಮಾಡಿಯೇ ಗಾಂಧಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಯಿತು ಎಂಬುದನ್ನು ಅರ್ಥ ಮಾಡಿಕೊಂಡು ಮತ ಚಲಾಯಿಸಬೇಕು’ ಎಂದು ಹೇಳಿದರು.