<p><del>ಪ್ರಜಾವಾಣಿ</del> ವಾರ್ತೆ</p>.<p><strong>ಮೈಸೂರು</strong>: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮತ್ತೊಮ್ಮೆ ಬೆಂಬಲ ನೀಡಲು ನೇಕಾರ ಸಮುದಾಯದಿಂದ ಏ. 21ರಂದು ಬೆಳಿಗ್ಗೆ 10.30ಕ್ಕೆ ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯದ ಅಭಿವೃದ್ಧಿಗೆ ನೇಕಾರ ಸಮ್ಮಾನ್ ಯೋಜನೆ, ಅಭಿವೃದ್ಧಿ ನಿಗಮ, ನೇಕಾರ ಸಾಲಮನ್ನಾ ಯೋಜನೆ ಮೂಲಕ ಬಿಜೆಪಿ ಸರ್ಕಾರ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣದ ಆದೇಶವನ್ನೂ ಮಾಡಿದೆ’ ಎಂದರು.</p>.<p>‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಬೆಂಬಲಕ್ಕೆ ಸಮುದಾಯ ಸಜ್ಜಾಗಬೇಕು. ಎಲ್ಲರೂ ಸಮಾವೇಶಕ್ಕೆ ಆಗಮಿಸಿ ಬಿಜೆಪಿಗೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ.ಸತೀಶ್, ಜಿಲ್ಲಾ ಕಾರ್ಯದರ್ಶಿ ಚಲುವರಾಜು, ಪ್ರಕೋಷ್ಠ ರಾಜ್ಯ ಸದಸ್ಯ ಎಸ್.ಆರ್.ನಾಗಭೂಷಣ, ದೇವಾಂಗ ಸಂಘದ ಚಾಮರಾಜನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಮೋಹನ್, ಪ್ರಮುಖರಾದ ಹೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><del>ಪ್ರಜಾವಾಣಿ</del> ವಾರ್ತೆ</p>.<p><strong>ಮೈಸೂರು</strong>: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮತ್ತೊಮ್ಮೆ ಬೆಂಬಲ ನೀಡಲು ನೇಕಾರ ಸಮುದಾಯದಿಂದ ಏ. 21ರಂದು ಬೆಳಿಗ್ಗೆ 10.30ಕ್ಕೆ ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯದ ಅಭಿವೃದ್ಧಿಗೆ ನೇಕಾರ ಸಮ್ಮಾನ್ ಯೋಜನೆ, ಅಭಿವೃದ್ಧಿ ನಿಗಮ, ನೇಕಾರ ಸಾಲಮನ್ನಾ ಯೋಜನೆ ಮೂಲಕ ಬಿಜೆಪಿ ಸರ್ಕಾರ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣದ ಆದೇಶವನ್ನೂ ಮಾಡಿದೆ’ ಎಂದರು.</p>.<p>‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಬೆಂಬಲಕ್ಕೆ ಸಮುದಾಯ ಸಜ್ಜಾಗಬೇಕು. ಎಲ್ಲರೂ ಸಮಾವೇಶಕ್ಕೆ ಆಗಮಿಸಿ ಬಿಜೆಪಿಗೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ.ಸತೀಶ್, ಜಿಲ್ಲಾ ಕಾರ್ಯದರ್ಶಿ ಚಲುವರಾಜು, ಪ್ರಕೋಷ್ಠ ರಾಜ್ಯ ಸದಸ್ಯ ಎಸ್.ಆರ್.ನಾಗಭೂಷಣ, ದೇವಾಂಗ ಸಂಘದ ಚಾಮರಾಜನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಮೋಹನ್, ಪ್ರಮುಖರಾದ ಹೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>