ತೊಂದರೆಯಾಗದಂತೆ ಯೋಜನೆ: ‘ಸ್ಥಳೀಯರು, ಕ್ರೀಡಾಪಟುಗಳು, ಪಾದಚಾರಿಗಳು ಸೇರಿದಂತೆ ಯಾರಿಗೂ ತೊಂದರೆ ಆಗದಂತೆ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಬೀದಿಬದಿ ವ್ಯಾಪಾರಿಗಳು ಒಂದೇ ಕಡೆ ವ್ಯಾಪಾರ ಮಾಡಲಿ ಎಂಬುದು ಇದರ ಉದ್ದೇಶ. ಮಾರಾಟ ವಲಯದಲ್ಲಿ ವ್ಯಾಪಾರಿಗಳಿಗೆ ಎಲ್ಲಾ ರೀತಿಯ ಸೌಕರ್ಯ ಕಲ್ಪಿಸಿಕೊಡಲಾಗುವುದು. ಅದರಿಂದ ನೈರ್ಮಲ್ಯ ಕಾಪಾಡಿಕೊಳ್ಳಲು ಸುಲಭವಾಗುತ್ತದೆ. ಈ ಯೋಜನೆಗೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಯದಡಿ ಕೇಂದ್ರದಿಂದ ಅನುದಾನ ದೊರೆಯುತ್ತಿದೆ’ ಎಂದು ಪಾಲಿಕೆ ಹೆಚ್ಚುವರಿ ಆಯುಕ್ತ ಶಶಿಕುಮಾರ್ ತಿಳಿಸಿದರು.