<p><strong>ಎಚ್.ಡಿ.ಕೋಟೆ:</strong> ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಸೋಮವಾರ ಕಾಣಿಸಿಕೊಂಡು ಆತಂಕ ಮೂಡಿಸಿದವು.</p>.<p>ಕಾಡಿನಿಂದ ಎರಡು ಆನೆಗಳು ಜಲಾಶಯದ ಹಿನ್ನೀರಿನ ಮೂಲಕ ಈಜಿಕೊಂಡು ಬೀಚನಹಳ್ಳಿ ಸಮೀಪ ಬರುತ್ತಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.</p>.<p>ಬೀರ್ವಾಳು, ತೆರಣಿಮುಂಟಿ, ಬಿದರಹಳ್ಳಿ ಗ್ರಾಮಗಳ ಮೂಲಕ ಬಂದಿರುವ ಆನೆಗಳು ಕಬಿನಿ ಹಿನ್ನೀರಿನ ಬಳಿ ಬೀಡುಬಿಟ್ಟಿವೆ. ಅರಣ್ಯ ಅಧಿಕಾರಿಗಳು, ಅಣೆಕಟ್ಟು ಭದ್ರತಾ ಸಿಬ್ಬಂದಿ ಸೇರಿ ಆನೆಗಳನ್ನು ಓಡಿಸಲು ಸತತ ಪ್ರಯತ್ನ ಮಾಡಿದರು. ಆನೆಗಳನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನ ಸೇರಿದ್ದರು.</p>.<p>‘ಆನೆಗಳು ಎನ್. ಬೇಗೂರು ಅರಣ್ಯ ವಲಯ ವ್ಯಾಪ್ತಿಯಿಂದ ಬಂದಿರುವುದಾಗಿ ತಿಳಿದು ಬಂದಿದ್ದು, ಆ ಭಾಗದಲ್ಲಿ ರೈತರು ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಕಾರಣ ಸಂಜೆ ಎನ್. ಬೇಗೂರು ಅರಣ್ಯಕ್ಕೆ ಅಟ್ಟಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಎಚ್.ಡಿ.ಕೋಟೆ ಉಪವಲಯ ಅರಣ್ಯಾಧಿಕಾರಿ ಪರಮೇಶ್, ಆನೆ ಕಾರ್ಯಪಡೆ ಉಪವಲಯ ಅರಣ್ಯಾಧಿಕಾರಿ ನವೀನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ತಾಲ್ಲೂಕಿನ ಕಬಿನಿ ಜಲಾಶಯ ಸಮೀಪದ ಹಿನ್ನೀರಿನಲ್ಲಿ ಎರಡು ಕಾಡಾನೆಗಳು ಸೋಮವಾರ ಕಾಣಿಸಿಕೊಂಡು ಆತಂಕ ಮೂಡಿಸಿದವು.</p>.<p>ಕಾಡಿನಿಂದ ಎರಡು ಆನೆಗಳು ಜಲಾಶಯದ ಹಿನ್ನೀರಿನ ಮೂಲಕ ಈಜಿಕೊಂಡು ಬೀಚನಹಳ್ಳಿ ಸಮೀಪ ಬರುತ್ತಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.</p>.<p>ಬೀರ್ವಾಳು, ತೆರಣಿಮುಂಟಿ, ಬಿದರಹಳ್ಳಿ ಗ್ರಾಮಗಳ ಮೂಲಕ ಬಂದಿರುವ ಆನೆಗಳು ಕಬಿನಿ ಹಿನ್ನೀರಿನ ಬಳಿ ಬೀಡುಬಿಟ್ಟಿವೆ. ಅರಣ್ಯ ಅಧಿಕಾರಿಗಳು, ಅಣೆಕಟ್ಟು ಭದ್ರತಾ ಸಿಬ್ಬಂದಿ ಸೇರಿ ಆನೆಗಳನ್ನು ಓಡಿಸಲು ಸತತ ಪ್ರಯತ್ನ ಮಾಡಿದರು. ಆನೆಗಳನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನ ಸೇರಿದ್ದರು.</p>.<p>‘ಆನೆಗಳು ಎನ್. ಬೇಗೂರು ಅರಣ್ಯ ವಲಯ ವ್ಯಾಪ್ತಿಯಿಂದ ಬಂದಿರುವುದಾಗಿ ತಿಳಿದು ಬಂದಿದ್ದು, ಆ ಭಾಗದಲ್ಲಿ ರೈತರು ಜಮೀನಿನಲ್ಲಿ ಕೆಲಸ ಮಾಡುತ್ತಿರುವ ಕಾರಣ ಸಂಜೆ ಎನ್. ಬೇಗೂರು ಅರಣ್ಯಕ್ಕೆ ಅಟ್ಟಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಎಚ್.ಡಿ.ಕೋಟೆ ಉಪವಲಯ ಅರಣ್ಯಾಧಿಕಾರಿ ಪರಮೇಶ್, ಆನೆ ಕಾರ್ಯಪಡೆ ಉಪವಲಯ ಅರಣ್ಯಾಧಿಕಾರಿ ನವೀನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>