<p><strong>ಮೈಸೂರು</strong>: ‘ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡುಹಿಡಿಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಹುಲಿ, ಆನೆಗಳು ಅರಣ್ಯದಿಂದ ಹೊರ ಬರಲು ಕಾರಣವೇನು? ಇದನ್ನು ತಡೆಯಲು, ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಂಟಾನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>‘ವನ್ಯಜೀವಿ– ಮಾನವ ಸಂಘರ್ಷ ತಪ್ಪಿಸಲು ಚರ್ಚಿಸುವ ಸಂಬಂಧ ಪ್ರತ್ಯೇಕ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು’ ಎಂದು ತಿಳಿಸಿದರು.</p>.<p>‘ಈಗಾಗಲೇ ಸಹಾಯವಾಣಿ ಆರಂಭಿಸಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p><p>‘ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ 7ಸಾವಿರ ಅರ್ಜಿಗಳಲ್ಲಿ 5,900 ಅರ್ಜಿಗಳು ತಿರಸ್ಕೃತವಾಗಿರುವುದಕ್ಕೆ ಕಾರಣವೇನು’ ಎಂದು ಮುಖ್ಯಮಂತ್ರಿ ಕೇಳಿದರು.</p><p>‘ಇವು 2019-20ರಿಂದ ತಿರಸ್ಕೃತವಾದವು. ತಿರಸ್ಕರಿಸುವಾಗ ಸ್ಪಷ್ಟ ಹಾಗೂ ನೈಜ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.</p><p>‘ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿದೆಯೇ?’ ಎಂದು ಕೇಳಿದ ಮುಖ್ಯಮಂತ್ರಿ, ‘ಹಾಡಿ ಜನರು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು’ ಎಂದು ಸೂಚಿಸಿದರು.</p><p>ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ಎಚ್.ಡಿ.ಕೋಟೆಯಲ್ಲಿ ಎಸಿಎಫ್ ಮತ್ತು ಆರ್ಎಫ್ಒ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ’ ಎಂದು ದೂರಿದರು.</p><p>‘ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯ ಲೋಪದಿಂದ ಮಾನವ ಜೀವ ಹಾನಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡುಹಿಡಿಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಹುಲಿ, ಆನೆಗಳು ಅರಣ್ಯದಿಂದ ಹೊರ ಬರಲು ಕಾರಣವೇನು? ಇದನ್ನು ತಡೆಯಲು, ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು. ಲಂಟಾನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>‘ವನ್ಯಜೀವಿ– ಮಾನವ ಸಂಘರ್ಷ ತಪ್ಪಿಸಲು ಚರ್ಚಿಸುವ ಸಂಬಂಧ ಪ್ರತ್ಯೇಕ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು’ ಎಂದು ತಿಳಿಸಿದರು.</p>.<p>‘ಈಗಾಗಲೇ ಸಹಾಯವಾಣಿ ಆರಂಭಿಸಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p><p>‘ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ 7ಸಾವಿರ ಅರ್ಜಿಗಳಲ್ಲಿ 5,900 ಅರ್ಜಿಗಳು ತಿರಸ್ಕೃತವಾಗಿರುವುದಕ್ಕೆ ಕಾರಣವೇನು’ ಎಂದು ಮುಖ್ಯಮಂತ್ರಿ ಕೇಳಿದರು.</p><p>‘ಇವು 2019-20ರಿಂದ ತಿರಸ್ಕೃತವಾದವು. ತಿರಸ್ಕರಿಸುವಾಗ ಸ್ಪಷ್ಟ ಹಾಗೂ ನೈಜ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.</p><p>‘ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗುತ್ತಿದೆಯೇ?’ ಎಂದು ಕೇಳಿದ ಮುಖ್ಯಮಂತ್ರಿ, ‘ಹಾಡಿ ಜನರು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಬೇಕು’ ಎಂದು ಸೂಚಿಸಿದರು.</p><p>ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ‘ಎಚ್.ಡಿ.ಕೋಟೆಯಲ್ಲಿ ಎಸಿಎಫ್ ಮತ್ತು ಆರ್ಎಫ್ಒ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ’ ಎಂದು ದೂರಿದರು.</p><p>‘ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯ ಲೋಪದಿಂದ ಮಾನವ ಜೀವ ಹಾನಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>