<p><strong>ಮೈಸೂರು:</strong> ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನ ಹಾಡಿ, ಗ್ರಾಮಗಳಲ್ಲಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ತಡೆಯುವಂತೆ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ರಾಷ್ಟ್ರೀಯ ಹುಲಿ ಸಂಕಕ್ಷಣಾ ಪ್ರಾಧಿಕಾರ(ಎನ್ಟಿಸಿಎ)ಕ್ಕೆ ಪತ್ರ ಬರೆದಿದ್ದಾರೆ. </p>.<p>‘ಪ್ರಜಾವಾಣಿ’ಯಲ್ಲಿ ಡಿ.15ರಂದು ಒಳನೋಟದಲ್ಲಿ ಪ್ರಕಟವಾಗಿದ್ದ ವರದಿ ‘ಕಬಿನಿಯಲ್ಲಿ ಮದ್ಯದ ‘ಹೊಳೆ’ ಹಾಗೂ 2014 ಜುಲೈ 1ರಂದು ಎನ್ಟಿಸಿಎ ನಡೆಸಿದ್ದ ಸ್ಥಳ ಪರಿಶೀಲನಾ ವರದಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.</p>.<p>ಎನ್ಟಿಸಿಎ ಜೊತೆಗೆ ರಾಜ್ಯ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ, ಹುಲಿ ಯೋಜನೆ ನಿರ್ದೇಶಕರಿಗೂ ಪತ್ರ ಬರೆದಿದ್ದಾರೆ.</p>.<p>‘ಕೇರಳ ಗಡಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲಿ ಹಲವು ಬಾರ್ಗಳನ್ನು ತೆರೆಯಲು ಪರವಾನಗಿ ನೀಡಲಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಬುಡಕಟ್ಟು ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಡಿ.ಬಿ.ಕುಪ್ಪೆ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಕಡೆಗದ್ದೆ ಗ್ರಾಮದಲ್ಲಿ ಹುಲಿಸಂರಕ್ಷಿತ ಪ್ರದೇಶದಲ್ಲಿಯೇ ಮದ್ಯದಂಗಡಿ ತೆರೆಯಲಾಗಿದ್ದು, ಈ ಬಗ್ಗೆ ಎನ್ಟಿಸಿಎ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವನ್ಯಜೀವಿಗಳಿಗೆ ತೊಂದರೆಯಾಗುತ್ತಿರುವ ಹಾಗೂ ಕಾನೂನು ಮತ್ತು ನಿಯಮ ಉಲ್ಲಂಘಿಸಿರುವ ಬಗ್ಗೆ 2014ರಲ್ಲೇ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದರು’ ಎಂದು ಉಲ್ಲೇಖಿಸಿದ್ದಾರೆ.</p>.<p>‘1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 33 (ಎ) ಪ್ರಕಾರ ಸರ್ಕಾರಿ ಲಾಡ್ಜ್ಗಳು ಸೇರಿದಂತೆ ಯಾವುದೇ ಪ್ರವಾಸಿ ಲಾಡ್ಜ್, ಹೋಟೆಲ್, ಮೃಗಾಲಯ ಮತ್ತು ಸಫಾರಿಗಳನ್ನು ಸಂರಕ್ಷಿತ ಪ್ರದೇಶದಲ್ಲಿ ರಾಷ್ಟ್ರೀಯ ಮಂಡಳಿ ಅನುಮತಿಯಿಲ್ಲದೆ ತೆರೆಯುವಂತಿಲ್ಲ. ಆದರೆ, ಡಿ.ಬಿ.ಕುಪ್ಪೆ ವಲಯದಲ್ಲಿ ಈ ನಿಯಮ ಉಲ್ಲಂಘಿಸಲಾಗಿದೆ’ ಎಂದಿದ್ದಾರೆ.</p>.<p>‘ಮದ್ಯದಂಗಡಿಗಳ ಪರವಾನಗಿ ರದ್ದುಗೊಳಿಸಿ, ಯಾವುದೇ ವಾಣಿಜ್ಯ ಚಟುವಟಿಕೆ ನಡೆಯದಂತೆ ಕ್ರಮ ವಹಿಸಲು ಅರಣ್ಯ ಇಲಾಖೆ, ಕಂದಾಯ, ಅಬಕಾರಿ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಗೆ ಸೂಚಿಸಬೇಕು. ನಾಗರಹೊಳೆಯ ಜೀವ ವೈವಿಧ್ಯ ಹಾಗೂ ಬುಡಕಟ್ಟು ಜನರ ಜೀವನವನ್ನು ಉಳಿಸಬೇಕು’ ಎಂದು ಪ್ರಾಧಿಕಾರವನ್ನು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನ ಹಾಡಿ, ಗ್ರಾಮಗಳಲ್ಲಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ತಡೆಯುವಂತೆ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ ಕುಲಕರ್ಣಿ ರಾಷ್ಟ್ರೀಯ ಹುಲಿ ಸಂಕಕ್ಷಣಾ ಪ್ರಾಧಿಕಾರ(ಎನ್ಟಿಸಿಎ)ಕ್ಕೆ ಪತ್ರ ಬರೆದಿದ್ದಾರೆ. </p>.<p>‘ಪ್ರಜಾವಾಣಿ’ಯಲ್ಲಿ ಡಿ.15ರಂದು ಒಳನೋಟದಲ್ಲಿ ಪ್ರಕಟವಾಗಿದ್ದ ವರದಿ ‘ಕಬಿನಿಯಲ್ಲಿ ಮದ್ಯದ ‘ಹೊಳೆ’ ಹಾಗೂ 2014 ಜುಲೈ 1ರಂದು ಎನ್ಟಿಸಿಎ ನಡೆಸಿದ್ದ ಸ್ಥಳ ಪರಿಶೀಲನಾ ವರದಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.</p>.<p>ಎನ್ಟಿಸಿಎ ಜೊತೆಗೆ ರಾಜ್ಯ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ, ಹುಲಿ ಯೋಜನೆ ನಿರ್ದೇಶಕರಿಗೂ ಪತ್ರ ಬರೆದಿದ್ದಾರೆ.</p>.<p>‘ಕೇರಳ ಗಡಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲಿ ಹಲವು ಬಾರ್ಗಳನ್ನು ತೆರೆಯಲು ಪರವಾನಗಿ ನೀಡಲಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಬುಡಕಟ್ಟು ಜನರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಡಿ.ಬಿ.ಕುಪ್ಪೆ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಕಡೆಗದ್ದೆ ಗ್ರಾಮದಲ್ಲಿ ಹುಲಿಸಂರಕ್ಷಿತ ಪ್ರದೇಶದಲ್ಲಿಯೇ ಮದ್ಯದಂಗಡಿ ತೆರೆಯಲಾಗಿದ್ದು, ಈ ಬಗ್ಗೆ ಎನ್ಟಿಸಿಎ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವನ್ಯಜೀವಿಗಳಿಗೆ ತೊಂದರೆಯಾಗುತ್ತಿರುವ ಹಾಗೂ ಕಾನೂನು ಮತ್ತು ನಿಯಮ ಉಲ್ಲಂಘಿಸಿರುವ ಬಗ್ಗೆ 2014ರಲ್ಲೇ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದರು’ ಎಂದು ಉಲ್ಲೇಖಿಸಿದ್ದಾರೆ.</p>.<p>‘1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 33 (ಎ) ಪ್ರಕಾರ ಸರ್ಕಾರಿ ಲಾಡ್ಜ್ಗಳು ಸೇರಿದಂತೆ ಯಾವುದೇ ಪ್ರವಾಸಿ ಲಾಡ್ಜ್, ಹೋಟೆಲ್, ಮೃಗಾಲಯ ಮತ್ತು ಸಫಾರಿಗಳನ್ನು ಸಂರಕ್ಷಿತ ಪ್ರದೇಶದಲ್ಲಿ ರಾಷ್ಟ್ರೀಯ ಮಂಡಳಿ ಅನುಮತಿಯಿಲ್ಲದೆ ತೆರೆಯುವಂತಿಲ್ಲ. ಆದರೆ, ಡಿ.ಬಿ.ಕುಪ್ಪೆ ವಲಯದಲ್ಲಿ ಈ ನಿಯಮ ಉಲ್ಲಂಘಿಸಲಾಗಿದೆ’ ಎಂದಿದ್ದಾರೆ.</p>.<p>‘ಮದ್ಯದಂಗಡಿಗಳ ಪರವಾನಗಿ ರದ್ದುಗೊಳಿಸಿ, ಯಾವುದೇ ವಾಣಿಜ್ಯ ಚಟುವಟಿಕೆ ನಡೆಯದಂತೆ ಕ್ರಮ ವಹಿಸಲು ಅರಣ್ಯ ಇಲಾಖೆ, ಕಂದಾಯ, ಅಬಕಾರಿ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಗೆ ಸೂಚಿಸಬೇಕು. ನಾಗರಹೊಳೆಯ ಜೀವ ವೈವಿಧ್ಯ ಹಾಗೂ ಬುಡಕಟ್ಟು ಜನರ ಜೀವನವನ್ನು ಉಳಿಸಬೇಕು’ ಎಂದು ಪ್ರಾಧಿಕಾರವನ್ನು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>