<p><strong>ಹುಣಸೂರು</strong>: ನಾಗರಹೊಳೆ ಅರಣ್ಯದ ಆನೆಚೌಕೂರು ವಲಯದ ಪ್ರಭನಹಳ್ಳ ಎಂಬಲ್ಲಿ ಅಕ್ರಮ ಬೇಟೆಗೆ ಹೊಂಚು ಹಾಕಿದ್ದ ನಾಲ್ವರಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ ಎಂದು ಎಸಿಎಫ್ ಲಕ್ಷ್ಮಿಕಾಂತ್ ತಿಳಿಸಿದ್ದಾರೆ. ಅಭಿಲಾಷ್ ಮತ್ತು ಕಿರಣ್ ಬಂಧಿತರು</p>.<p>ಘಟನೆ ವಿವರ: ನಾಗರಹೊಳೆ ಅರಣ್ಯ ಆನೆಚೌಕೂರು ವಲಯದ ಪ್ರಭನಹಳ್ಳ ಎಂಬಲ್ಲಿ ನಾಲ್ವರು ಆರೋಪಿಗಳು ಮಾರಕಾಸ್ರ್ರ ಮತ್ತು ಬಂದೂಕಿನೊಂದಿಗೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ವನ್ಯಪ್ರಾಣಿ ಭೇಟೆಯಾಡಲು ಹೊಂಚು ಹಾಕಿದ್ದರು. ಈ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ಇಲಾಖೆ ಸಿಬ್ಬಂದಿಗೆ ಸಿಕ್ಕ ಸುಳಿವಿನ ಮೇಲೆ ಕಾರ್ಯೋನ್ಮೂಖರಾಗಿ ಕಾರ್ಯಾಚರಣೆ ನಡೆಸಿ ನಾಲ್ವರಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಿಂದ ಮಾರಕಾಸ್ತ್ರ ಮತ್ತು ಬಂದೂಕು, ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಆರೋಪಿಗಳಾದ ಸ್ವಾಮಿ, ಶ್ರೇಯಸ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ದೇವರಾಜ್, ರಾಮಣ್ಣ, ಮೋಜಣಿದಾರ ಅನಿಲ್, ಗಸ್ತುಪಾಲಕರಾದ ಪ್ರದೀಪ್ ದಳವಾಹಿ, ಅಕ್ಷಯ್, ಮಧು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ನಾಗರಹೊಳೆ ಅರಣ್ಯದ ಆನೆಚೌಕೂರು ವಲಯದ ಪ್ರಭನಹಳ್ಳ ಎಂಬಲ್ಲಿ ಅಕ್ರಮ ಬೇಟೆಗೆ ಹೊಂಚು ಹಾಕಿದ್ದ ನಾಲ್ವರಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ ಎಂದು ಎಸಿಎಫ್ ಲಕ್ಷ್ಮಿಕಾಂತ್ ತಿಳಿಸಿದ್ದಾರೆ. ಅಭಿಲಾಷ್ ಮತ್ತು ಕಿರಣ್ ಬಂಧಿತರು</p>.<p>ಘಟನೆ ವಿವರ: ನಾಗರಹೊಳೆ ಅರಣ್ಯ ಆನೆಚೌಕೂರು ವಲಯದ ಪ್ರಭನಹಳ್ಳ ಎಂಬಲ್ಲಿ ನಾಲ್ವರು ಆರೋಪಿಗಳು ಮಾರಕಾಸ್ರ್ರ ಮತ್ತು ಬಂದೂಕಿನೊಂದಿಗೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ವನ್ಯಪ್ರಾಣಿ ಭೇಟೆಯಾಡಲು ಹೊಂಚು ಹಾಕಿದ್ದರು. ಈ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ಇಲಾಖೆ ಸಿಬ್ಬಂದಿಗೆ ಸಿಕ್ಕ ಸುಳಿವಿನ ಮೇಲೆ ಕಾರ್ಯೋನ್ಮೂಖರಾಗಿ ಕಾರ್ಯಾಚರಣೆ ನಡೆಸಿ ನಾಲ್ವರಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಿಂದ ಮಾರಕಾಸ್ತ್ರ ಮತ್ತು ಬಂದೂಕು, ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಆರೋಪಿಗಳಾದ ಸ್ವಾಮಿ, ಶ್ರೇಯಸ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ದೇವರಾಜ್, ರಾಮಣ್ಣ, ಮೋಜಣಿದಾರ ಅನಿಲ್, ಗಸ್ತುಪಾಲಕರಾದ ಪ್ರದೀಪ್ ದಳವಾಹಿ, ಅಕ್ಷಯ್, ಮಧು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>