<p><strong>ತಿ.ನರಸೀಪುರ</strong>: ತಾಲ್ಲೂಕಿನ ಕನ್ನನಾಯಕನಹಳ್ಳಿಯಲ್ಲಿ ಶುಕ್ರವಾರ ಚಿರತೆ ದಾಳಿಯಿಂದ ಸಿದ್ದಮ್ಮ (60) ಎಂಬುವವರು ಮೃತಪಟ್ಟರು.</p>.<p>ಮನೆ ಹಿಂಭಾಗ ದಲ್ಲಿ ಸಂಜೆ ಸೌದೆ ತರಲು ಹೋಗಿದ್ದಾಗ ಚಿರತೆ ದಾಳಿ ಮಾಡಿದೆ. ಮುಖ ಹಾಗೂ ಕತ್ತಿನ ಬಳಿ ತೀವ್ರ ಗಾಯವಾಗಿದ್ದರಿಂದ ಸ್ಥಳದಲ್ಲೇ ಅಸುನೀಗಿದರು.</p>.<p>ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಭೇಟಿ ನೀಡಿ ಪರಿಶೀಲಿಸಿದರು.</p>.<p class="Subhead"><strong>ಚಿರತೆ ಸೆರೆಗೆ ಸೂಚನೆ: </strong>ಕನ್ನನಾಯಕನ ಹಳ್ಳಿಗೆ ಭೇಟಿ ನೀಡಿದ ಶಾಸಕ ಅಶ್ವಿನ್ ಕುಮಾರ್ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>‘ಇಂತಹ ಘಟನೆಗಳು ಮರುಕಳಿಸುತ್ತಿರುವುದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ಚಿರತೆ ಸೆರೆಗೆ ಶನಿವಾರದಿಂದಲೇ ಕಾರ್ಯಾಚರಣೆ ಆರಂಭಿಸಬೇಕು. ಕ್ಯಾಮೆರಾಗಳನ್ನು ಅಳವಡಿಸಿ ಚಿರತೆ ಚಲನವಲನಗಳ ಮೇಲೆ ನಿಗಾ ವಹಿಸಬೇಕು’ ಎಂದು ಅಶ್ವಿನ್ ಕುಮಾರ್ ಅವರು ಡಿಸಿಎಫ್ ಮಹೇಶ್, ಎಸಿಎಫ್ ಲಕ್ಷ್ಮೀಕಾಂತ್ ಅವರಿಗೆ ಸೂಚಿಸಿದರು.</p>.<p>‘ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೆ. ವನ್ಯಜೀವಿ ಹಾವಳಿ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ. ಮೃತ ಸಿದ್ದಮ್ಮ ಅವರ ಕುಟುಂಬದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಗ್ರಾಮದ ನಾಲ್ಕು ದಿಕ್ಕುಗಳಲ್ಲಿ ಶನಿವಾರ ಬೆಳಿಗ್ಗೆ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದರು.</p>.<p>ತಹಶೀಲ್ದಾರ್ ಸಿ.ಜಿ.ಗೀತಾ, ಬನ್ನೂರು ಮತ್ತು ತಿ.ನರಸೀಪುರ ಠಾಣೆ ಪೊಲೀಸ್ ಸಿಬ್ಬಂದಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಎಂ.ರಮೇಶ್, ಕೊತ್ತೇಗಾಲ ಬಸವರಾಜು ಇದ್ದರು.</p>.<p class="Briefhead"><strong>2 ತಿಂಗಳ ಹಿಂದಷ್ಟೇ ಇಬ್ಬರ ಸಾವು</strong><br />ಎರಡು ತಿಂಗಳ ಹಿಂದಷ್ಟೇ ಎಂ.ಎಲ್. ಹುಂಡಿ ಗ್ರಾಮದ ಯುವಕ ಮಂಜುನಾಥ್ ಹಾಗೂ ಎಸ್. ಕೆಬ್ಬೆಹುಂಡಿಯ ವಿದ್ಯಾರ್ಥಿನಿ ಮೇಘನಾ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಸಿದ್ದಮ್ಮ ಮೇಲೆ ಚಿರತೆ ದಾಳಿ ನಡೆಸಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮುತ್ತತ್ತಿ ಬಳಿ ಹಾಗೂ ಉಕ್ಕಲಗೆರೆ ಬೆಟ್ಟದ ಬಳಿ ಎರಡು ಚಿರತೆಗಳನ್ನು ಸೆರೆ ಹಿಡಿದಿದ್ದರು. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಚಿರತೆ ದಾಳಿ ನಡೆಸಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ</strong>: ತಾಲ್ಲೂಕಿನ ಕನ್ನನಾಯಕನಹಳ್ಳಿಯಲ್ಲಿ ಶುಕ್ರವಾರ ಚಿರತೆ ದಾಳಿಯಿಂದ ಸಿದ್ದಮ್ಮ (60) ಎಂಬುವವರು ಮೃತಪಟ್ಟರು.</p>.<p>ಮನೆ ಹಿಂಭಾಗ ದಲ್ಲಿ ಸಂಜೆ ಸೌದೆ ತರಲು ಹೋಗಿದ್ದಾಗ ಚಿರತೆ ದಾಳಿ ಮಾಡಿದೆ. ಮುಖ ಹಾಗೂ ಕತ್ತಿನ ಬಳಿ ತೀವ್ರ ಗಾಯವಾಗಿದ್ದರಿಂದ ಸ್ಥಳದಲ್ಲೇ ಅಸುನೀಗಿದರು.</p>.<p>ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಭೇಟಿ ನೀಡಿ ಪರಿಶೀಲಿಸಿದರು.</p>.<p class="Subhead"><strong>ಚಿರತೆ ಸೆರೆಗೆ ಸೂಚನೆ: </strong>ಕನ್ನನಾಯಕನ ಹಳ್ಳಿಗೆ ಭೇಟಿ ನೀಡಿದ ಶಾಸಕ ಅಶ್ವಿನ್ ಕುಮಾರ್ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>‘ಇಂತಹ ಘಟನೆಗಳು ಮರುಕಳಿಸುತ್ತಿರುವುದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ಚಿರತೆ ಸೆರೆಗೆ ಶನಿವಾರದಿಂದಲೇ ಕಾರ್ಯಾಚರಣೆ ಆರಂಭಿಸಬೇಕು. ಕ್ಯಾಮೆರಾಗಳನ್ನು ಅಳವಡಿಸಿ ಚಿರತೆ ಚಲನವಲನಗಳ ಮೇಲೆ ನಿಗಾ ವಹಿಸಬೇಕು’ ಎಂದು ಅಶ್ವಿನ್ ಕುಮಾರ್ ಅವರು ಡಿಸಿಎಫ್ ಮಹೇಶ್, ಎಸಿಎಫ್ ಲಕ್ಷ್ಮೀಕಾಂತ್ ಅವರಿಗೆ ಸೂಚಿಸಿದರು.</p>.<p>‘ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೆ. ವನ್ಯಜೀವಿ ಹಾವಳಿ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ. ಮೃತ ಸಿದ್ದಮ್ಮ ಅವರ ಕುಟುಂಬದವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಗ್ರಾಮದ ನಾಲ್ಕು ದಿಕ್ಕುಗಳಲ್ಲಿ ಶನಿವಾರ ಬೆಳಿಗ್ಗೆ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದರು.</p>.<p>ತಹಶೀಲ್ದಾರ್ ಸಿ.ಜಿ.ಗೀತಾ, ಬನ್ನೂರು ಮತ್ತು ತಿ.ನರಸೀಪುರ ಠಾಣೆ ಪೊಲೀಸ್ ಸಿಬ್ಬಂದಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಎಂ.ರಮೇಶ್, ಕೊತ್ತೇಗಾಲ ಬಸವರಾಜು ಇದ್ದರು.</p>.<p class="Briefhead"><strong>2 ತಿಂಗಳ ಹಿಂದಷ್ಟೇ ಇಬ್ಬರ ಸಾವು</strong><br />ಎರಡು ತಿಂಗಳ ಹಿಂದಷ್ಟೇ ಎಂ.ಎಲ್. ಹುಂಡಿ ಗ್ರಾಮದ ಯುವಕ ಮಂಜುನಾಥ್ ಹಾಗೂ ಎಸ್. ಕೆಬ್ಬೆಹುಂಡಿಯ ವಿದ್ಯಾರ್ಥಿನಿ ಮೇಘನಾ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಸಿದ್ದಮ್ಮ ಮೇಲೆ ಚಿರತೆ ದಾಳಿ ನಡೆಸಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮುತ್ತತ್ತಿ ಬಳಿ ಹಾಗೂ ಉಕ್ಕಲಗೆರೆ ಬೆಟ್ಟದ ಬಳಿ ಎರಡು ಚಿರತೆಗಳನ್ನು ಸೆರೆ ಹಿಡಿದಿದ್ದರು. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಚಿರತೆ ದಾಳಿ ನಡೆಸಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>