ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಂಜನಗೂಡು: ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು

Published 27 ಜನವರಿ 2024, 14:16 IST
Last Updated 27 ಜನವರಿ 2024, 14:16 IST
ಅಕ್ಷರ ಗಾತ್ರ

ನಂಜನಗೂಡು: ತಾಲ್ಲೂಕಿನ ಸಂಗಮ ಕ್ಷೇತ್ರದ ಮಹದೇವ ತಾತ ಗದ್ದುಗೆ ಬಳಿ ಶುಕ್ರವಾರ ಕಪಿಲಾ ನದಿಯಲ್ಲಿ ಕಾಲು ಜಾರಿ ಬಿದ್ದು ಶಕುಂತಲಾ (48) ಎಂಬುವರು ಮೃತಪಟ್ಟರು.

ಮೈಸೂರಿನ ಕುವೆಂಪು ನಗರದ ನಿವಾಸಿ ನಂಜಪ್ಪಸ್ವಾಮಿ ಅವರ ಪತ್ನಿ ಶಕುಂತಲಾ ಕುಟುಂಬದೊಂದಿಗೆ ಸಂಗಮ ಕ್ಷೇತ್ರಕ್ಕೆ ದೇವರ ದರ್ಶನಕ್ಕೆಂದು ಬಂದಿದ್ದರು. ನದಿಗೆ ಇಳಿದು ಕಾಲು ತೊಳೆಯುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಕೂಡಲೇ ನದಿಗೆ ಇಳಿದ ನಂಜಪ್ಪಸ್ವಾಮಿ ಪತ್ನಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT