<p><strong>ಮೈಸೂರು</strong>: ‘ಮಹಿಳೆಗೆ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ’ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ‘ಇಂದಿನ ಸಮಾಜ ಮಹಿಳೆಯರ ಕುರಿತು ಮನೋಭಾವವನ್ನು ಬದಲಿಸಿಕೊಳ್ಳಬೇಕು’ ಎಂದರು.</p>.<p>‘ಮಹಿಳೆಯರನ್ನು ಗೌರವಿಸಬೇಕು. ಅವರನ್ನು ಮುಖ್ಯ ವಾಹಿನಿಗೆ ತರಲು ಹೆಚ್ಚು ಅವಕಾಶ ಇರಬೇಕು’ ಎಂದು ಆಶಿಸಿದರು.</p>.<p>‘ಸ್ವಾತಂತ್ರ್ಯವೆಂದರೆ ಅನ್ಯರ ಕಪಿ ಮುಷ್ಟಿಯಿಂದ ಹೊರ ಬರುವುದಷ್ಟೇ ಅಲ್ಲ. ಬದಲಿಗೆ ಕಾನೂನು ಪಾಲಿಸುವುದು, ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕೆ ಪಣ ತೊಡುವುದು ಹಾಗೂ ಮೌಲ್ಯಯುತ ಜೀವನ ರೂಪಿಸಿಕೊಳ್ಳುವುದೇ ಆಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಅಬ್ದುಲ್ ರಹಿಮಾನ್ ಎಂ., ‘ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗ–ಬಲಿದಾನ ಮನಗಂಡು ಅವರ ಮೌಲ್ಯಗಳನ್ನು ಪಾಲಿಸಬೇಕು’ ಎಂದು ಹೇಳಿದರು.</p>.<p>ಸಹ ಪ್ರಾಧ್ಯಾಪಕಿ ಕಿರಣ್ಮಯಿ ಪಿ. ನಾಗವಂದ ಮಾತನಾಡಿದರು. ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಆರ್, ಎನ್.ಎಸ್.ಎಸ್.ಅಧಿಕಾರಿ ಲಕ್ಷ್ಮಣ ಬಿ., ದೈಹಿಕ ಶಿಕ್ಷಣ ನಿರ್ದೇಶಕಿ ಪ್ರತಿಮಾ ಕೆ.ಆರ್. ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು ಹಾಜರಿದ್ದರು.</p>.<p>ಹಾಸ್ಟೆಲ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸರಸ್ವತಿಪುರಂನಲ್ಲಿರುವ ದೀನದಯಾಳ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಆವರಣದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಿಂದ ಸ್ವಾತಂತ್ರ್ಯ ದಿನ ಆಚರಿಸಲಾಯಿತು.</p>.<p>ಶೈಕ್ಷಣಿಕ ಡೀನ್ ಶ್ರೀಪಾದ್ ಎಚ್.ಆರ್., ಹನುಮಂತಪ್ಪ ಮಕರಿ, ರಮೇಶ್ ಕೆ.ಎಲ್., ಅಭಿನಂದಿನಿ, ಲೀಲಾವತಿ, ಸುಧಾ, ಲಕ್ಷ್ಮಣ ಬಿ., ಸಿದ್ದರಾಜು, ನಿಲಯಪಾಲಕಿ ಪದ್ಮಾ ಸಿ., ಗೋವಿಂದರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮಹಿಳೆಗೆ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ’ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ‘ಇಂದಿನ ಸಮಾಜ ಮಹಿಳೆಯರ ಕುರಿತು ಮನೋಭಾವವನ್ನು ಬದಲಿಸಿಕೊಳ್ಳಬೇಕು’ ಎಂದರು.</p>.<p>‘ಮಹಿಳೆಯರನ್ನು ಗೌರವಿಸಬೇಕು. ಅವರನ್ನು ಮುಖ್ಯ ವಾಹಿನಿಗೆ ತರಲು ಹೆಚ್ಚು ಅವಕಾಶ ಇರಬೇಕು’ ಎಂದು ಆಶಿಸಿದರು.</p>.<p>‘ಸ್ವಾತಂತ್ರ್ಯವೆಂದರೆ ಅನ್ಯರ ಕಪಿ ಮುಷ್ಟಿಯಿಂದ ಹೊರ ಬರುವುದಷ್ಟೇ ಅಲ್ಲ. ಬದಲಿಗೆ ಕಾನೂನು ಪಾಲಿಸುವುದು, ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕೆ ಪಣ ತೊಡುವುದು ಹಾಗೂ ಮೌಲ್ಯಯುತ ಜೀವನ ರೂಪಿಸಿಕೊಳ್ಳುವುದೇ ಆಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಅಬ್ದುಲ್ ರಹಿಮಾನ್ ಎಂ., ‘ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ತ್ಯಾಗ–ಬಲಿದಾನ ಮನಗಂಡು ಅವರ ಮೌಲ್ಯಗಳನ್ನು ಪಾಲಿಸಬೇಕು’ ಎಂದು ಹೇಳಿದರು.</p>.<p>ಸಹ ಪ್ರಾಧ್ಯಾಪಕಿ ಕಿರಣ್ಮಯಿ ಪಿ. ನಾಗವಂದ ಮಾತನಾಡಿದರು. ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಆರ್, ಎನ್.ಎಸ್.ಎಸ್.ಅಧಿಕಾರಿ ಲಕ್ಷ್ಮಣ ಬಿ., ದೈಹಿಕ ಶಿಕ್ಷಣ ನಿರ್ದೇಶಕಿ ಪ್ರತಿಮಾ ಕೆ.ಆರ್. ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು ಹಾಜರಿದ್ದರು.</p>.<p>ಹಾಸ್ಟೆಲ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸರಸ್ವತಿಪುರಂನಲ್ಲಿರುವ ದೀನದಯಾಳ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯದ ಆವರಣದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಿಂದ ಸ್ವಾತಂತ್ರ್ಯ ದಿನ ಆಚರಿಸಲಾಯಿತು.</p>.<p>ಶೈಕ್ಷಣಿಕ ಡೀನ್ ಶ್ರೀಪಾದ್ ಎಚ್.ಆರ್., ಹನುಮಂತಪ್ಪ ಮಕರಿ, ರಮೇಶ್ ಕೆ.ಎಲ್., ಅಭಿನಂದಿನಿ, ಲೀಲಾವತಿ, ಸುಧಾ, ಲಕ್ಷ್ಮಣ ಬಿ., ಸಿದ್ದರಾಜು, ನಿಲಯಪಾಲಕಿ ಪದ್ಮಾ ಸಿ., ಗೋವಿಂದರಾಜು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>