<p><strong>ಮೈಸೂರು:</strong> ‘ನಿರ್ಮಾಣ ಕ್ಷೇತ್ರವು ಕೃಷಿ ನಂತರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರವಾಗಿದೆ. ಇಲ್ಲಿನ ಸಮಸ್ಯೆಗಳ ಕುರಿತು ಗಮನಕ್ಕೆ ತಂದಲ್ಲಿ ತ್ವರಿತವಾಗಿ ಅದನ್ನು ಬಗೆಹರಿಸುತ್ತೇವೆ’ ಎಂದು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಅಧ್ಯಕ್ಷ ರಾಕೇಶ್ ಸಿಂಗ್ ತಿಳಿಸಿದರು.</p>.<p>ರೇರಾ, ಕ್ರೆಡಾಯ್ ಮೈಸೂರು ಸಹಯೋಗದಲ್ಲಿ ಶನಿವಾರ ವಿದ್ಯಾರಣ್ಯಪುರಂನ ಎಂಬಿಸಿಟಿ ಹಾಲ್ನಲ್ಲಿ ಆಯೋಜಿಸಿದ್ದ ರೇರಾ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಅಭಿವೃದ್ಧಿಗೆ ನಿರ್ಮಾಣ ಕ್ಷೇತ್ರವೇ ಆಧಾರವಾಗಿದೆ. ಪ್ರತಿ ಜಿಡಿಪಿಗೆ ಶೇ 12-13ರಷ್ಟು ಕೊಡುಗೆ ನೀಡುತ್ತಿದ್ದು, ದೇಶದ ಆರ್ಥಿಕತೆಯ ಬೆನ್ನೆಲುಬಾಗಿದೆ’ ಎಂದರು.</p>.<p>‘ಪ್ರತಿ ಕ್ಷೇತ್ರದಲ್ಲೂ ದುಡಿಯುವವರು ಮುಂದಿನ ಪೀಳಿಗೆಗೆ ಉತ್ತಮ ಸಮಾಜ, ಪೋಷಕರನ್ನು ಬಿಟ್ಟು ಹೋಗಬೇಕಿದೆ. ಅದಕ್ಕಾಗಿ ನಾವು ನಮ್ಮ ಕೆಲಸಗಳನ್ನು ಎಷ್ಟು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ‘ಬಡಾವಣೆಗಳ ಹಸ್ತಾಂತರ, ಇ-ಖಾತೆ, ಮೈಸೂರು ನಗರಪಾಲಿಕೆಯನ್ನು ಗ್ರೇಡ್-1 ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಮುಖ ಮೂರು ನಿರ್ಧಾರಗಳಿಂದ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಂದಿಷ್ಟು ಹಿನ್ನಡೆ ಆಗಿದೆ. ಈ ನಡುವೆಯೂ ಖಾಸಗಿ ಸಂಸ್ಥೆಗಳು ಪ್ರತಿ ವರ್ಷ 10– 15 ಸಾವಿರ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತಿರುವುದು ಅಚ್ಚರಿಯ ಸಂಗತಿ’ ಎಂದರು.</p>.<p>‘25 ವರ್ಷಗಳ ಹಿಂದೆ ಅಭಿವೃದ್ಧಿಪಡಿಸಿದ ಬಡಾವಣೆಗಳು ಹಸ್ತಾಂತರಗೊಳ್ಳದ ಕಾರಣಕ್ಕೆ ನಾಗರಿಕರಿಗೆ ಮೂಲಸೌಕರ್ಯಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಮುಡಾ ಸುಪರ್ದಿಯಲ್ಲಿದ್ದ 1 ಸಾವಿರಕ್ಕೂ ಹೆಚ್ಚು ಬಡಾವಣೆಗಳ 1 ಲಕ್ಷಕ್ಕೂ ಹೆಚ್ಚು ನಿವೇಶನಗಳ ಖಾತೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಉದ್ಯಮಕ್ಕೆ ಅನುಕೂಲ ಆಗಿದೆ’ ಎಂದು ವಿವರಿಸಿದರು.</p>.<p>ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕ್ರೆಡಾಯ್ ಮೈಸೂರು ಅಧ್ಯಕ್ಷ ಹರೀಶ್ ಶೆಣೈ, ಕಾರ್ಯದರ್ಶಿ ನಾಗರಾಜ್ ವಿ. ಭೈರಿ ಇದ್ದರು. ರೇರಾ ಕಾಯ್ದೆ ಕುರಿತು ರೇರಾ ಕಾರ್ಯದರ್ಶಿ ಎಚ್.ಆರ್. ಶಿವಕುಮಾರ್ ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಿರ್ಮಾಣ ಕ್ಷೇತ್ರವು ಕೃಷಿ ನಂತರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರವಾಗಿದೆ. ಇಲ್ಲಿನ ಸಮಸ್ಯೆಗಳ ಕುರಿತು ಗಮನಕ್ಕೆ ತಂದಲ್ಲಿ ತ್ವರಿತವಾಗಿ ಅದನ್ನು ಬಗೆಹರಿಸುತ್ತೇವೆ’ ಎಂದು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಅಧ್ಯಕ್ಷ ರಾಕೇಶ್ ಸಿಂಗ್ ತಿಳಿಸಿದರು.</p>.<p>ರೇರಾ, ಕ್ರೆಡಾಯ್ ಮೈಸೂರು ಸಹಯೋಗದಲ್ಲಿ ಶನಿವಾರ ವಿದ್ಯಾರಣ್ಯಪುರಂನ ಎಂಬಿಸಿಟಿ ಹಾಲ್ನಲ್ಲಿ ಆಯೋಜಿಸಿದ್ದ ರೇರಾ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಅಭಿವೃದ್ಧಿಗೆ ನಿರ್ಮಾಣ ಕ್ಷೇತ್ರವೇ ಆಧಾರವಾಗಿದೆ. ಪ್ರತಿ ಜಿಡಿಪಿಗೆ ಶೇ 12-13ರಷ್ಟು ಕೊಡುಗೆ ನೀಡುತ್ತಿದ್ದು, ದೇಶದ ಆರ್ಥಿಕತೆಯ ಬೆನ್ನೆಲುಬಾಗಿದೆ’ ಎಂದರು.</p>.<p>‘ಪ್ರತಿ ಕ್ಷೇತ್ರದಲ್ಲೂ ದುಡಿಯುವವರು ಮುಂದಿನ ಪೀಳಿಗೆಗೆ ಉತ್ತಮ ಸಮಾಜ, ಪೋಷಕರನ್ನು ಬಿಟ್ಟು ಹೋಗಬೇಕಿದೆ. ಅದಕ್ಕಾಗಿ ನಾವು ನಮ್ಮ ಕೆಲಸಗಳನ್ನು ಎಷ್ಟು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ‘ಬಡಾವಣೆಗಳ ಹಸ್ತಾಂತರ, ಇ-ಖಾತೆ, ಮೈಸೂರು ನಗರಪಾಲಿಕೆಯನ್ನು ಗ್ರೇಡ್-1 ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಮುಖ ಮೂರು ನಿರ್ಧಾರಗಳಿಂದ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಂದಿಷ್ಟು ಹಿನ್ನಡೆ ಆಗಿದೆ. ಈ ನಡುವೆಯೂ ಖಾಸಗಿ ಸಂಸ್ಥೆಗಳು ಪ್ರತಿ ವರ್ಷ 10– 15 ಸಾವಿರ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತಿರುವುದು ಅಚ್ಚರಿಯ ಸಂಗತಿ’ ಎಂದರು.</p>.<p>‘25 ವರ್ಷಗಳ ಹಿಂದೆ ಅಭಿವೃದ್ಧಿಪಡಿಸಿದ ಬಡಾವಣೆಗಳು ಹಸ್ತಾಂತರಗೊಳ್ಳದ ಕಾರಣಕ್ಕೆ ನಾಗರಿಕರಿಗೆ ಮೂಲಸೌಕರ್ಯಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಮುಡಾ ಸುಪರ್ದಿಯಲ್ಲಿದ್ದ 1 ಸಾವಿರಕ್ಕೂ ಹೆಚ್ಚು ಬಡಾವಣೆಗಳ 1 ಲಕ್ಷಕ್ಕೂ ಹೆಚ್ಚು ನಿವೇಶನಗಳ ಖಾತೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಉದ್ಯಮಕ್ಕೆ ಅನುಕೂಲ ಆಗಿದೆ’ ಎಂದು ವಿವರಿಸಿದರು.</p>.<p>ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕ್ರೆಡಾಯ್ ಮೈಸೂರು ಅಧ್ಯಕ್ಷ ಹರೀಶ್ ಶೆಣೈ, ಕಾರ್ಯದರ್ಶಿ ನಾಗರಾಜ್ ವಿ. ಭೈರಿ ಇದ್ದರು. ರೇರಾ ಕಾಯ್ದೆ ಕುರಿತು ರೇರಾ ಕಾರ್ಯದರ್ಶಿ ಎಚ್.ಆರ್. ಶಿವಕುಮಾರ್ ವಿಷಯ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>