<p><strong>ಕೆ.ಆರ್.ನಗರ: </strong>ಇಲ್ಲಿನ ಹಳೇ ಯಡತೊರೆ ಅರ್ಕೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ‘ಯಡತೊರೆ ಉತ್ಸವ’ಕ್ಕೆ ಶನಿವಾರ ಅದ್ಧೂರಿ ಚಾಲನೆ ದೊರೆಯಿತು. ಫೆ.11ರವರೆಗೆ ಉತ್ಸವ ನಡೆಯಲಿದೆ.</p>.<p>ಕಾರ್ಯಕ್ರಮವನ್ನು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಉದ್ಘಾಟಿಸಿದರು.</p>.<p>ಕಾವೇರಿ ನದಿ ದಂಡೆಯಲ್ಲಿ ಝಳು ಝಳು ಹರಿಯುವ ನೀರಿನ ಶಬ್ದ, ತಣ್ಣನೆ ಗಾಳಿ ನಡುವೆ ಶಿವರಾಜ್ ಕುಮಾರ್ ಹಾಕಿದ ಹೆಜ್ಜೆಗೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.</p>.<p>ಸ್ಥಳೀಯ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಜಯ್ ಅವರ ಕರ್ನಾಟಕ ದರ್ಶನ ನೃತ್ಯರೂಪಕ, ಗಾಯಕರಾದ ಹೇಮಂತ್, ಶಮಿತಾ ಮಲ್ನಾಡ್, ಕಾಮಿಡಿ ಗೋಪಿ ಹಾಗೂ ಸಾಯಿರಾಂ ನೃತ್ಯ ತಂಡದವರು ನಡೆಸಿಕೊಟ್ಟ ಸಂಗೀತ ರಸಸಂಜೆ ಪ್ರೇಕ್ಷಕರಿಗೆ ರಸದೌತಣ ಉಣಬಡಿಸಿದರು.</p>.<p>‘ನನ್ನ ತಾಯಿ ಪಾರ್ವತಮ್ಮ ರಾಜ್ಕುಮಾರ್ ಇದೇ ತಾಲ್ಲೂಕಿನ ಸಾಲಿಗ್ರಾಮದಲ್ಲಿ ಹುಟ್ಟಿದ್ದರು. ಅವರು ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ನಾನು ನನ್ನ ತಾಯಿ ಊರಿಗೆ ಬಂದಂತಾಗಿದೆ’ ಎಂದು ಶಿವರಾಜ್ ಕುಮಾರ್ ಹೇಳಿದರು.</p>.<p>ಇಂತಹ ಉತ್ಸವಗಳು ಆಗಾಗ ನಡೆಯಬೇಕು. ಇಲ್ಲಿನ ಇತಿಹಾಸ ಎಲ್ಲರಿಗೂ ತಿಳಿಯಬೇಕು ಎಂದರು.</p>.<p>ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾತನಾಡಿ, ‘ಪ್ರತಿಯೊಬ್ಬರೂ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಒತ್ತಡ ಮರೆತು ಉಲ್ಲಾಸಗೊಳ್ಳಲು ಇಂತಹ ಉತ್ಸವಗಳು ಸಹಕಾರಿ’ ಎಂದು ಹೇಳಿದರು.</p>.<p>ಪುರಸಭೆ ಅಧ್ಯಕ್ಷೆ ಹರ್ಷಲತಾ ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀಲಮಣಿ ರೇವಣ್ಣ, ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಉಪ ವಿಭಾಗಾಧಿಕಾರಿ ವೀಣಾ, ತಹಶೀಲ್ದಾರ್ ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ: </strong>ಇಲ್ಲಿನ ಹಳೇ ಯಡತೊರೆ ಅರ್ಕೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ‘ಯಡತೊರೆ ಉತ್ಸವ’ಕ್ಕೆ ಶನಿವಾರ ಅದ್ಧೂರಿ ಚಾಲನೆ ದೊರೆಯಿತು. ಫೆ.11ರವರೆಗೆ ಉತ್ಸವ ನಡೆಯಲಿದೆ.</p>.<p>ಕಾರ್ಯಕ್ರಮವನ್ನು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಉದ್ಘಾಟಿಸಿದರು.</p>.<p>ಕಾವೇರಿ ನದಿ ದಂಡೆಯಲ್ಲಿ ಝಳು ಝಳು ಹರಿಯುವ ನೀರಿನ ಶಬ್ದ, ತಣ್ಣನೆ ಗಾಳಿ ನಡುವೆ ಶಿವರಾಜ್ ಕುಮಾರ್ ಹಾಕಿದ ಹೆಜ್ಜೆಗೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.</p>.<p>ಸ್ಥಳೀಯ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಜಯ್ ಅವರ ಕರ್ನಾಟಕ ದರ್ಶನ ನೃತ್ಯರೂಪಕ, ಗಾಯಕರಾದ ಹೇಮಂತ್, ಶಮಿತಾ ಮಲ್ನಾಡ್, ಕಾಮಿಡಿ ಗೋಪಿ ಹಾಗೂ ಸಾಯಿರಾಂ ನೃತ್ಯ ತಂಡದವರು ನಡೆಸಿಕೊಟ್ಟ ಸಂಗೀತ ರಸಸಂಜೆ ಪ್ರೇಕ್ಷಕರಿಗೆ ರಸದೌತಣ ಉಣಬಡಿಸಿದರು.</p>.<p>‘ನನ್ನ ತಾಯಿ ಪಾರ್ವತಮ್ಮ ರಾಜ್ಕುಮಾರ್ ಇದೇ ತಾಲ್ಲೂಕಿನ ಸಾಲಿಗ್ರಾಮದಲ್ಲಿ ಹುಟ್ಟಿದ್ದರು. ಅವರು ಎಲ್ಲೂ ಹೋಗಿಲ್ಲ, ಇಲ್ಲೇ ಇದ್ದಾರೆ. ನಾನು ನನ್ನ ತಾಯಿ ಊರಿಗೆ ಬಂದಂತಾಗಿದೆ’ ಎಂದು ಶಿವರಾಜ್ ಕುಮಾರ್ ಹೇಳಿದರು.</p>.<p>ಇಂತಹ ಉತ್ಸವಗಳು ಆಗಾಗ ನಡೆಯಬೇಕು. ಇಲ್ಲಿನ ಇತಿಹಾಸ ಎಲ್ಲರಿಗೂ ತಿಳಿಯಬೇಕು ಎಂದರು.</p>.<p>ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾತನಾಡಿ, ‘ಪ್ರತಿಯೊಬ್ಬರೂ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಒತ್ತಡ ಮರೆತು ಉಲ್ಲಾಸಗೊಳ್ಳಲು ಇಂತಹ ಉತ್ಸವಗಳು ಸಹಕಾರಿ’ ಎಂದು ಹೇಳಿದರು.</p>.<p>ಪುರಸಭೆ ಅಧ್ಯಕ್ಷೆ ಹರ್ಷಲತಾ ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀಲಮಣಿ ರೇವಣ್ಣ, ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಉಪ ವಿಭಾಗಾಧಿಕಾರಿ ವೀಣಾ, ತಹಶೀಲ್ದಾರ್ ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>