<p><strong>ಮೈಸೂರು</strong>: ‘ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿಂದ ದೇಶ–ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದ್ದಾರೆ.</p>.<p>ಈ ಕುರಿತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಇಲ್ಲಿ ಈಗಿರುವ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರ (ಪಿಒಪಿಎಸ್ಕೆ)ವನ್ನು ತತ್ಕಾಲ್ ಸೇವೆಗಳೊಂದಿಗೆ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ (ಪಿಎಚ್ಕೆ)ವನ್ನಾಗಿ ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಇಟ್ಟಿಗೆಗೂಡಿನಲ್ಲಿರುವ ಪಾಸ್ಪೋರ್ಟ್ ಕಚೇರಿ ಆವರಣಕ್ಕೆ ಸ್ಥಳಾಂತರಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೈಸೂರಿನಲ್ಲಿ ಉನ್ನತ ಶಿಕ್ಷಣ, ಐಟಿ ವಲಯ, ಪ್ರವಾಸೋದ್ಯಮ ಮತ್ತು ವಿದೇಶಗಳಲ್ಲಿ ಉದ್ಯೋಗ ಕ್ಷೇತ್ರ ವಿಸ್ತರಣೆಯಾಗಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪಾಸ್ಪೋರ್ಟ್ ಸೇವೆಗಳಿಗೆ ಬೇಡಿಕೆ ತೀವ್ರವಾಗಿದೆ’ ಎಂದಿದ್ದಾರೆ.</p>.<p>‘ಸೀಮಿತ ಸಾಮರ್ಥ್ಯ ಮತ್ತು ತತ್ಕಾಲ್ ಸೇವೆ ಇಲ್ಲದಿರುವುದರಿಂದ ಪ್ರಸ್ತುತ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರವು ಸಾರ್ವಜನಿಕ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಎಲ್ಲದ್ದಕ್ಕೂ ಬೆಂಗಳೂರಿಗೆ ತೆರಳಬೇಕಾದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಲ್ಲಿ ಪೂರ್ಣ ಪ್ರಮಾಣದ ಕೇಂದ್ರ ಆರಂಭವಾದರೆ, ಬೆಂಗಳೂರು ಪಾಸ್ಪೋರ್ಟ್ ಸೇವಾ ಕೇಂದ್ರಗಳ ಮೇಲಿನ ಅವಲಂಬನೆ ತಗ್ಗಲಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದಿದ್ದಾರೆ. </p>.<p>‘ನನ್ನ ಕ್ಷೇತ್ರದ ವ್ಯಾಪ್ತಿಯ ಕೊಡಗಿನಲ್ಲಿ ಪಾಸ್ಪೋರ್ಟ್ ಪಡೆಯಬೇಕಾದದವರು ಮೈಸೂರು ಅಥವಾ ಬೆಂಗಳೂರಿಗೆ ಬರಬೇಕಾದ ಅನಿವಾರ್ಯವಿದೆ. ಹೀಗಾಗಿ, ಅಲ್ಲಿ ಮೆಗಾ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆಯೂ ಕೋರಿದ್ದೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿಂದ ದೇಶ–ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದ್ದಾರೆ.</p>.<p>ಈ ಕುರಿತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಇಲ್ಲಿ ಈಗಿರುವ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರ (ಪಿಒಪಿಎಸ್ಕೆ)ವನ್ನು ತತ್ಕಾಲ್ ಸೇವೆಗಳೊಂದಿಗೆ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ (ಪಿಎಚ್ಕೆ)ವನ್ನಾಗಿ ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಇಟ್ಟಿಗೆಗೂಡಿನಲ್ಲಿರುವ ಪಾಸ್ಪೋರ್ಟ್ ಕಚೇರಿ ಆವರಣಕ್ಕೆ ಸ್ಥಳಾಂತರಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಮೈಸೂರಿನಲ್ಲಿ ಉನ್ನತ ಶಿಕ್ಷಣ, ಐಟಿ ವಲಯ, ಪ್ರವಾಸೋದ್ಯಮ ಮತ್ತು ವಿದೇಶಗಳಲ್ಲಿ ಉದ್ಯೋಗ ಕ್ಷೇತ್ರ ವಿಸ್ತರಣೆಯಾಗಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪಾಸ್ಪೋರ್ಟ್ ಸೇವೆಗಳಿಗೆ ಬೇಡಿಕೆ ತೀವ್ರವಾಗಿದೆ’ ಎಂದಿದ್ದಾರೆ.</p>.<p>‘ಸೀಮಿತ ಸಾಮರ್ಥ್ಯ ಮತ್ತು ತತ್ಕಾಲ್ ಸೇವೆ ಇಲ್ಲದಿರುವುದರಿಂದ ಪ್ರಸ್ತುತ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರವು ಸಾರ್ವಜನಿಕ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಎಲ್ಲದ್ದಕ್ಕೂ ಬೆಂಗಳೂರಿಗೆ ತೆರಳಬೇಕಾದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಲ್ಲಿ ಪೂರ್ಣ ಪ್ರಮಾಣದ ಕೇಂದ್ರ ಆರಂಭವಾದರೆ, ಬೆಂಗಳೂರು ಪಾಸ್ಪೋರ್ಟ್ ಸೇವಾ ಕೇಂದ್ರಗಳ ಮೇಲಿನ ಅವಲಂಬನೆ ತಗ್ಗಲಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ’ ಎಂದಿದ್ದಾರೆ. </p>.<p>‘ನನ್ನ ಕ್ಷೇತ್ರದ ವ್ಯಾಪ್ತಿಯ ಕೊಡಗಿನಲ್ಲಿ ಪಾಸ್ಪೋರ್ಟ್ ಪಡೆಯಬೇಕಾದದವರು ಮೈಸೂರು ಅಥವಾ ಬೆಂಗಳೂರಿಗೆ ಬರಬೇಕಾದ ಅನಿವಾರ್ಯವಿದೆ. ಹೀಗಾಗಿ, ಅಲ್ಲಿ ಮೆಗಾ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆಯೂ ಕೋರಿದ್ದೇನೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>