<p><strong>ಮೈಸೂರು:</strong> ‘ನಗರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿವೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.</p>.<p>‘ಈ ಹಿಂದೆ ಬಂಧಿತನಾಗಿದ್ದ ಆರೋಪಿಯೊಬ್ಬ ನೀಡಿದ ಮಾಹಿತಿಯ ಮೇರೆಗೆ ಮಾದಕದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಬುಧವಾರ ಮೈಸೂರಿನಲ್ಲಿ ಮತ್ತೊಮ್ಮೆ ದಾಳಿ ನಡೆಸಿದೆ. ಅಲ್ಲಿ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗದಿದ್ದರೂ ಈ ಬೆಳವಣಿಗೆಯು ಆತಂಕಕಾರಿಯಾಗಿದೆ’ ಎಂದಿದ್ದಾರೆ.</p>.<p>‘ಮಾದಕ ದ್ರವ್ಯ ಜಾಲದ ತನಿಖೆಗಳು ಪದೇ ಪದೇ ಮೈಸೂರಿನತ್ತಲೇ ಬೆರಳು ತೋರಿಸುತ್ತಿವೆ. ಸಂಸ್ಕೃತಿ ಮತ್ತು ಪರಂಪರೆಗೆ ಹೆಸರಾಗಿದ್ದ ನಗರವು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮಾದಕ ದ್ರವ್ಯ ತನಿಖೆಗಳಿಂದಾಗಿ ಅಪಖ್ಯಾತಿ ಪಡೆಯುವಂತಾಗಿದೆ. ಇದು ಕೇವಲ ಕಾಕತಾಳೀಯವಲ್ಲ; ಹದಗೆಡುತ್ತಿರುವ ಕಾನೂನು– ಸುವ್ಯವಸ್ಥೆ ಮತ್ತು ದುರ್ಬಲ ಆಡಳಿತದ ನೇರ ಫಲಿತಾಂಶವಾಗಿದೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಗರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿವೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.</p>.<p>‘ಈ ಹಿಂದೆ ಬಂಧಿತನಾಗಿದ್ದ ಆರೋಪಿಯೊಬ್ಬ ನೀಡಿದ ಮಾಹಿತಿಯ ಮೇರೆಗೆ ಮಾದಕದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಬುಧವಾರ ಮೈಸೂರಿನಲ್ಲಿ ಮತ್ತೊಮ್ಮೆ ದಾಳಿ ನಡೆಸಿದೆ. ಅಲ್ಲಿ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗದಿದ್ದರೂ ಈ ಬೆಳವಣಿಗೆಯು ಆತಂಕಕಾರಿಯಾಗಿದೆ’ ಎಂದಿದ್ದಾರೆ.</p>.<p>‘ಮಾದಕ ದ್ರವ್ಯ ಜಾಲದ ತನಿಖೆಗಳು ಪದೇ ಪದೇ ಮೈಸೂರಿನತ್ತಲೇ ಬೆರಳು ತೋರಿಸುತ್ತಿವೆ. ಸಂಸ್ಕೃತಿ ಮತ್ತು ಪರಂಪರೆಗೆ ಹೆಸರಾಗಿದ್ದ ನಗರವು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮಾದಕ ದ್ರವ್ಯ ತನಿಖೆಗಳಿಂದಾಗಿ ಅಪಖ್ಯಾತಿ ಪಡೆಯುವಂತಾಗಿದೆ. ಇದು ಕೇವಲ ಕಾಕತಾಳೀಯವಲ್ಲ; ಹದಗೆಡುತ್ತಿರುವ ಕಾನೂನು– ಸುವ್ಯವಸ್ಥೆ ಮತ್ತು ದುರ್ಬಲ ಆಡಳಿತದ ನೇರ ಫಲಿತಾಂಶವಾಗಿದೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>