<p><strong>ಮೈಸೂರು:</strong> ‘ಜಿಲ್ಲೆಯ ತಿ.ನರಸೀಪುರದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್ಐಸಿ ಜಾಗ ನೀಡಬಾರದು. ಸರ್ಕಾರವು ಈ ನಿಟ್ಟಿನಲ್ಲಿ ಕೈಗೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕೋರಿದ್ದಾರೆ.</p><p>ಇಲ್ಲಿಗೆ ಬುಧವಾರ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿರುವ ಅವರು, ‘ಸಾಂಸ್ಕೃತಿಕ ನಗರಿ ಮೈಸೂರು ಇಂದಿಗೂ ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾಗಿದೆ. ತಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ಕಾರ್ಖಾನೆಯ ಘಟಕವು ನೂರಾರು ಕಾರ್ಮಿಕರಿಗೆ ಜೀವನಾಡಿಯಾಗಿದೆ. ಈ ನಿಟ್ಟಿನಲ್ಲಿ ಅದನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.</p><p>‘ಕೆಎಸ್ಐಸಿ ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗ ಹಸ್ತಾಂತರಿಸಲಾಗಿದೆ. ಅಲ್ಲಿ ಕ್ರೀಡಾಂಗಣ ನಿರ್ಮಿಸಿದರೆ ಕಾರ್ಮಿಕರು ಮತ್ತು ರೈತರ ಬದುಕು ದುಸ್ತರವಾಗಲಿದೆ. ಈ ನಿಟ್ಟಿನಲ್ಲಿ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮನವಿ ಮಾಡಿದ್ದಾರೆ.</p><p>‘ಆ ಕಾರ್ಖಾನೆ ಆವರಣದಲ್ಲಿ 500ಕ್ಕೂ ಹೆಚ್ಚು ತೇಗ, ಶ್ರೀಗಂಧ ಮರಗಳಿವೆ. ಸ್ಟೇಡಿಯಂ ನಿರ್ಮಿಸಲು ಮುಂದಾದರೆ ಈ ಮರಗಳು ನಾಶವಾಗಲಿವೆ. ಐತಿಹಾಸಿಕ ಘಟಕವನ್ನು ಸಂರಕ್ಷಿಸಬೇಕಾದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಕ್ರೀಡಾಂಗಣಕ್ಕೆ ಪರ್ಯಾಯವಾಗಿ ಕೊರ್ಲಹಳ್ಳಿ ಅಥವಾ ಇತರ ಸರ್ಕಾರಿ ಜಾಗ ಗುರುತಿಸಿ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೋರಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p><h3>ವಿಮಾನ ನಿಲ್ದಾಣ ಪ್ರಕ್ರಿಯೆಗೂ ಶೀಘ್ರ ಚಾಲನೆ:</h3><p>‘ಮೈಸೂರು ವಿಮಾನನಿಲ್ದಾಣ ವಿಸ್ತರಣೆ ಪ್ರಕ್ರಿಯೆ ತ್ವರಿತಗೊಳಿಸಲು ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರನ್ನು ವಿನಂತಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಇತರ ಕೆಲಸಗಳು ಬಹುತೇಕ ಪೂರ್ಣಗೊಂಡಿದೆ ಎಂಬ ಭರವಸೆ ಇದೆ. ಇದರ ಬಗ್ಗೆ ಖಚಿತತೆ ಸಿಕ್ಕ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಜಿಲ್ಲೆಯ ತಿ.ನರಸೀಪುರದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್ಐಸಿ ಜಾಗ ನೀಡಬಾರದು. ಸರ್ಕಾರವು ಈ ನಿಟ್ಟಿನಲ್ಲಿ ಕೈಗೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಕೋರಿದ್ದಾರೆ.</p><p>ಇಲ್ಲಿಗೆ ಬುಧವಾರ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿರುವ ಅವರು, ‘ಸಾಂಸ್ಕೃತಿಕ ನಗರಿ ಮೈಸೂರು ಇಂದಿಗೂ ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾಗಿದೆ. ತಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ಕಾರ್ಖಾನೆಯ ಘಟಕವು ನೂರಾರು ಕಾರ್ಮಿಕರಿಗೆ ಜೀವನಾಡಿಯಾಗಿದೆ. ಈ ನಿಟ್ಟಿನಲ್ಲಿ ಅದನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ.</p><p>‘ಕೆಎಸ್ಐಸಿ ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗ ಹಸ್ತಾಂತರಿಸಲಾಗಿದೆ. ಅಲ್ಲಿ ಕ್ರೀಡಾಂಗಣ ನಿರ್ಮಿಸಿದರೆ ಕಾರ್ಮಿಕರು ಮತ್ತು ರೈತರ ಬದುಕು ದುಸ್ತರವಾಗಲಿದೆ. ಈ ನಿಟ್ಟಿನಲ್ಲಿ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮನವಿ ಮಾಡಿದ್ದಾರೆ.</p><p>‘ಆ ಕಾರ್ಖಾನೆ ಆವರಣದಲ್ಲಿ 500ಕ್ಕೂ ಹೆಚ್ಚು ತೇಗ, ಶ್ರೀಗಂಧ ಮರಗಳಿವೆ. ಸ್ಟೇಡಿಯಂ ನಿರ್ಮಿಸಲು ಮುಂದಾದರೆ ಈ ಮರಗಳು ನಾಶವಾಗಲಿವೆ. ಐತಿಹಾಸಿಕ ಘಟಕವನ್ನು ಸಂರಕ್ಷಿಸಬೇಕಾದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>‘ಕ್ರೀಡಾಂಗಣಕ್ಕೆ ಪರ್ಯಾಯವಾಗಿ ಕೊರ್ಲಹಳ್ಳಿ ಅಥವಾ ಇತರ ಸರ್ಕಾರಿ ಜಾಗ ಗುರುತಿಸಿ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೋರಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p><h3>ವಿಮಾನ ನಿಲ್ದಾಣ ಪ್ರಕ್ರಿಯೆಗೂ ಶೀಘ್ರ ಚಾಲನೆ:</h3><p>‘ಮೈಸೂರು ವಿಮಾನನಿಲ್ದಾಣ ವಿಸ್ತರಣೆ ಪ್ರಕ್ರಿಯೆ ತ್ವರಿತಗೊಳಿಸಲು ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರನ್ನು ವಿನಂತಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಇತರ ಕೆಲಸಗಳು ಬಹುತೇಕ ಪೂರ್ಣಗೊಂಡಿದೆ ಎಂಬ ಭರವಸೆ ಇದೆ. ಇದರ ಬಗ್ಗೆ ಖಚಿತತೆ ಸಿಕ್ಕ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>