<p><strong>ಮೈಸೂರು:</strong> ‘ನೋಂದಾಯಿತ ಮತ್ತು ನೋಂದಾಯಿಸದ ಬೆಳೆಗಾರರ ಹೆಚ್ಚುವರಿ ಎಫ್ಸಿವಿ ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.</p><p>‘ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (ಎಫ್ಸಿವಿ) ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಬೆಳೆಗಾರರ ಅನುಕೂಲಕ್ಕಾಗಿ ಅಧಿಕಾರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ಅದಕ್ಕೆ ಸ್ಪಂದನೆ ದೊರೆತಿದೆ. 2025-26ನೇ ಸಾಲಿನಲ್ಲಿ ಉತ್ಪಾದಿಸಿದ ಎಫ್ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕೆ.ಜಿಗೆ₹ 1 ಮತ್ತು ಮಾರಾಟದ ಆದಾಯದಲ್ಲಿ ಶೇ 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ’ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನೋಂದಾಯಿತ ಮತ್ತು ನೋಂದಾಯಿಸದ ಬೆಳೆಗಾರರ ಹೆಚ್ಚುವರಿ ಎಫ್ಸಿವಿ ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.</p><p>‘ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (ಎಫ್ಸಿವಿ) ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>‘ಬೆಳೆಗಾರರ ಅನುಕೂಲಕ್ಕಾಗಿ ಅಧಿಕಾರಿಗಳು ಹಾಗೂ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ಅದಕ್ಕೆ ಸ್ಪಂದನೆ ದೊರೆತಿದೆ. 2025-26ನೇ ಸಾಲಿನಲ್ಲಿ ಉತ್ಪಾದಿಸಿದ ಎಫ್ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕೆ.ಜಿಗೆ₹ 1 ಮತ್ತು ಮಾರಾಟದ ಆದಾಯದಲ್ಲಿ ಶೇ 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ’ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>