ಸತತ ಎರಡು ಬಾರಿ ಆಯ್ಕೆಯಾಗಿದ್ದ ಪ್ರತಾಪ ಸಿಂಹ ಅವರ ಬದಲು, ಹೊಸ ಮುಖಕ್ಕೆ ಮಣೆ ಹಾಕಿದ್ದ ಬಿಜೆಪಿ ‘ಪ್ರಯೋಗ’ ಯಶಸ್ವಿಯಾಗಿದೆ. ‘ರಾಜಕಾರಣಕ್ಕೂ ನನಗೂ ಆಗಿ ಬರುವುದಿಲ್ಲ’ ಎನ್ನುತ್ತಲೇ ಕೊನೆ ಕ್ಷಣದಲ್ಲಿ ಬಿಜೆಪಿಗೆ ಸೇರಿ ಸ್ಪರ್ಧಿಸಿದ್ದ ‘ಅರಸು ಕುಡಿ’, ಯದುವೀರ್ ಅವರಿಗೆ ಮತದಾರರು ‘ಬಹುಪರಾಕ್’ ಹೇಳಿದ್ದಾರೆ. ಇದರೊಂದಿಗೆ, ಬಿಜೆಪಿ ‘ಹ್ಯಾಟ್ರಿಕ್’ ಗೆಲುವು ಸಾಧಿಸಿ ಬೀಗಿದೆ.