<p><strong>ಮೈಸೂರು</strong>: ‘ಆರ್ಎಸ್ಎಸ್ ಬಿತ್ತುವ ಸಿದ್ಧಾಂತದಿಂದ ಪ್ರಭಾವಕ್ಕೆ ಒಳಗಾದವರೇ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದದ್ದು’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದರು. </p><p>ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಆರ್ಎಸ್ಎಸ್ನವರು ನಾವು ಒಳ್ಳೆಯವರೆಂದು ತೋರಿಸಿಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿಯ ಉತ್ಕೃಷ್ಟ ಮೌಲ್ಯಗಳನ್ನು ತೋರಿಸುತ್ತೇವೆ ಎನ್ನುತ್ತಾರೆ. ಆದರೆ, ಮಾಡುವುದೆಲ್ಲವೂ ಅನಾಚಾರ; ಮನೆ ಮುಂದೆ ಬೃಂದಾವನ ಎನ್ನವಂತಾಗಿದೆ’ ಎಂದರು.</p><p>‘ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವುದು ಸರಿಯಾಗಿದೆ. ಬೇರೆ ಸಂಸ್ಥೆಗಳಿಗೆ ಅನುಮತಿ ಪಡೆಯದೇ ಕಾರ್ಯಕ್ರಮಕ್ಕೆ ಅವಕಾಶ ಕೊಡುತ್ತಿದ್ದೀವಾ ನಾವು? ಉದ್ಯಾನಗಳಲ್ಲಿ ಪಥಸಂಚಲನಕ್ಕೆ ಅವಕಾಶ ಸಾಧ್ಯವೇ? ಇಡೀ ದೇಶಕ್ಕೆ ಒಂದು ಕಾನೂನು; ಆರ್ಎಸ್ಎಸ್ಗೆ ಒಂದು ಕಾನೂನು ಏಕೆ?’ ಎಂದು ಕೇಳಿದರು.</p><p>ನಿರ್ದಿಷ್ಟ ಸಿದ್ಧಾಂತ ಇಟ್ಟುಕೊಂಡು: </p><p>‘ಆರ್ಎಸ್ಎಸ್ ಕೇವಲ ಸಾಂಸ್ಕೃತಿಕ ಸಂಸ್ಥೆಯಲ್ಲ, ಅದೊಂದು ರಾಜಕೀಯ ಸಂಸ್ಥೆ. ನಿರ್ದಿಷ್ಟ ಸಿದ್ಧಾಂತ ಇಟ್ಟುಕೊಂಡು ಎಲ್ಲೆಡೆ ಹರಡಲು ಯತ್ನಿಸುತ್ತಿದೆ. ಶಾಲಾ– ಕಾಲೇಜುಗಳಲ್ಲಿ ಒಂದು ಕಾರ್ಯಸೂಚಿ ಇಟ್ಟುಕೊಂಡು ಕೆಲಸ ಮಾಡಲು ಅವಕಾಶ ಕೊಡಬಾರದು. ಆರ್ಎಸ್ಎಸ್ ಸಂವಿಧಾನಕ್ಕಿಂತಲೂ ಮೇಲೇನಲ್ಲ’ ಎಂದರು. </p><p>‘ನಾವು ಯಾರ ಹಕ್ಕುಗಳನ್ನೂ ಕಿತ್ತುಕೊಂಡಿಲ್ಲ. ನಿಯಮ ಪಾಲಿಸಿ ಕಾರ್ಯಕ್ರಮ ಮಾಡಲಿ. ಈ ನಿಟ್ಟಿನಲ್ಲಿ ತಮಿಳುನಾಡಿನಲ್ಲಿರುವ ನಿಯಮಗಳನ್ನು ರಾಜ್ಯದಲ್ಲೂ ಜಾರಿಗೊಳಿಸುತ್ತೇವೆ’ ಎಂದು ಹೇಳಿದರು.</p><p>‘ನಿಷೇಧಗೊಂಡಿದ್ದ ಸಂಸ್ಥೆಯದು. ಆ ಬಗ್ಗೆ ಇತಿಹಾಸವೇ ಇದೆ. ನಾವೇನೂ ನಿಷೇಧಿಸಲು ಹೊರಟಿಲ್ಲ. ಸಾರ್ವಜನಕ ಸ್ಥಳ ಹಾಗೂ ಶಾಲಾ–ಕಾಲೇಜುಗಳಲ್ಲಿ ಅನುಮತಿ ಪಡೆಯದೆ ಪಥಸಂಚಲನಕ್ಕೆ ಅವಕಾಶ ಇಲ್ಲ ಎಂದಷ್ಟೇ ಹೇಳುತ್ತಿದ್ದೇವೆ’ ಎಂದರು.</p><p>‘ಅದು ನೋಂದಣಿಯಾಗಿಲ್ಲದ ಸಂಸ್ಥೆ. ಸಂಪೂರ್ಣವಾಗಿ ಕಾನೂನು ಬಾಹಿರವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ನಮ್ಮ ಸರ್ಕಾರ ಯೋಚನೆ ಮಾಡುತ್ತಿರುವುದು ಸರಿಯಾಗಿದೆ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಆರ್ಎಸ್ಎಸ್ ಬಿತ್ತುವ ಸಿದ್ಧಾಂತದಿಂದ ಪ್ರಭಾವಕ್ಕೆ ಒಳಗಾದವರೇ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದದ್ದು’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದರು. </p><p>ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಆರ್ಎಸ್ಎಸ್ನವರು ನಾವು ಒಳ್ಳೆಯವರೆಂದು ತೋರಿಸಿಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿಯ ಉತ್ಕೃಷ್ಟ ಮೌಲ್ಯಗಳನ್ನು ತೋರಿಸುತ್ತೇವೆ ಎನ್ನುತ್ತಾರೆ. ಆದರೆ, ಮಾಡುವುದೆಲ್ಲವೂ ಅನಾಚಾರ; ಮನೆ ಮುಂದೆ ಬೃಂದಾವನ ಎನ್ನವಂತಾಗಿದೆ’ ಎಂದರು.</p><p>‘ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವುದು ಸರಿಯಾಗಿದೆ. ಬೇರೆ ಸಂಸ್ಥೆಗಳಿಗೆ ಅನುಮತಿ ಪಡೆಯದೇ ಕಾರ್ಯಕ್ರಮಕ್ಕೆ ಅವಕಾಶ ಕೊಡುತ್ತಿದ್ದೀವಾ ನಾವು? ಉದ್ಯಾನಗಳಲ್ಲಿ ಪಥಸಂಚಲನಕ್ಕೆ ಅವಕಾಶ ಸಾಧ್ಯವೇ? ಇಡೀ ದೇಶಕ್ಕೆ ಒಂದು ಕಾನೂನು; ಆರ್ಎಸ್ಎಸ್ಗೆ ಒಂದು ಕಾನೂನು ಏಕೆ?’ ಎಂದು ಕೇಳಿದರು.</p><p>ನಿರ್ದಿಷ್ಟ ಸಿದ್ಧಾಂತ ಇಟ್ಟುಕೊಂಡು: </p><p>‘ಆರ್ಎಸ್ಎಸ್ ಕೇವಲ ಸಾಂಸ್ಕೃತಿಕ ಸಂಸ್ಥೆಯಲ್ಲ, ಅದೊಂದು ರಾಜಕೀಯ ಸಂಸ್ಥೆ. ನಿರ್ದಿಷ್ಟ ಸಿದ್ಧಾಂತ ಇಟ್ಟುಕೊಂಡು ಎಲ್ಲೆಡೆ ಹರಡಲು ಯತ್ನಿಸುತ್ತಿದೆ. ಶಾಲಾ– ಕಾಲೇಜುಗಳಲ್ಲಿ ಒಂದು ಕಾರ್ಯಸೂಚಿ ಇಟ್ಟುಕೊಂಡು ಕೆಲಸ ಮಾಡಲು ಅವಕಾಶ ಕೊಡಬಾರದು. ಆರ್ಎಸ್ಎಸ್ ಸಂವಿಧಾನಕ್ಕಿಂತಲೂ ಮೇಲೇನಲ್ಲ’ ಎಂದರು. </p><p>‘ನಾವು ಯಾರ ಹಕ್ಕುಗಳನ್ನೂ ಕಿತ್ತುಕೊಂಡಿಲ್ಲ. ನಿಯಮ ಪಾಲಿಸಿ ಕಾರ್ಯಕ್ರಮ ಮಾಡಲಿ. ಈ ನಿಟ್ಟಿನಲ್ಲಿ ತಮಿಳುನಾಡಿನಲ್ಲಿರುವ ನಿಯಮಗಳನ್ನು ರಾಜ್ಯದಲ್ಲೂ ಜಾರಿಗೊಳಿಸುತ್ತೇವೆ’ ಎಂದು ಹೇಳಿದರು.</p><p>‘ನಿಷೇಧಗೊಂಡಿದ್ದ ಸಂಸ್ಥೆಯದು. ಆ ಬಗ್ಗೆ ಇತಿಹಾಸವೇ ಇದೆ. ನಾವೇನೂ ನಿಷೇಧಿಸಲು ಹೊರಟಿಲ್ಲ. ಸಾರ್ವಜನಕ ಸ್ಥಳ ಹಾಗೂ ಶಾಲಾ–ಕಾಲೇಜುಗಳಲ್ಲಿ ಅನುಮತಿ ಪಡೆಯದೆ ಪಥಸಂಚಲನಕ್ಕೆ ಅವಕಾಶ ಇಲ್ಲ ಎಂದಷ್ಟೇ ಹೇಳುತ್ತಿದ್ದೇವೆ’ ಎಂದರು.</p><p>‘ಅದು ನೋಂದಣಿಯಾಗಿಲ್ಲದ ಸಂಸ್ಥೆ. ಸಂಪೂರ್ಣವಾಗಿ ಕಾನೂನು ಬಾಹಿರವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ನಮ್ಮ ಸರ್ಕಾರ ಯೋಚನೆ ಮಾಡುತ್ತಿರುವುದು ಸರಿಯಾಗಿದೆ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>