<p>ಮೈಸೂರು: ‘ಈಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಕಾಳಜಿ ಹೆಚ್ಚುತ್ತಿದ್ದು, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಜನಪ್ರಿಯವಾಗುತ್ತಿದೆ’ ಎಂದು ಆಯುಷ್ ಇಲಾಖೆ ಆಯುಕ್ತ ಡಾ. ಶ್ರೀನಿವಾಸಲು ಹೇಳಿದರು.</p>.<p>ನಗರದ ಕಲಾಮಂದಿರದಲ್ಲಿ ಶನಿವಾರ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಗೌರವ ತರುವಂತಹ ಕೆಲಸಗಳನ್ನು ವಿದ್ಯಾರ್ಥಿಗಳು ಮಾಡಬೇಕು. ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಜನರಿಗೆ ಆರೋಗ್ಯದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ರಾಷ್ಟ್ರೀಯ ಆರೋಗ್ಯ ಆಯೋಗ ರಚಿಸಲಾಗಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಸಾತ್ವಿಕ ಆಹಾರ, ವಿಹಾರ ಕ್ರಮದಿಂದ ಆರೋಗ್ಯ ಭಾಗ್ಯ ಪಡೆಯಬಹುದು’ ಎಂದು ಹೇಳಿದರು.</p>.<p>ಆಯುಷ್ ಇಲಾಖೆ ನಿರ್ದೇಶಕ ಡಾ.ರಾಘವೇಂದ್ರ ರಾವ್ ಮಾತನಾಡಿ, ‘ವೈದ್ಯ ವೃತ್ತಿ ಪವಿತ್ರವಾಗಿದ್ದು, ತುಂಬು ಹೃದಯದಿಂದ ರೋಗಿಗಳ ಸೇವೆ ಮಾಡಬೇಕು. ವಿವಿಧ ವೈದ್ಯಕೀಯ ಪದ್ಧತಿಗಳ ಪ್ರಯೋಜನ ರೋಗಿಗಳಿಗೆ ಸಿಗುವಂತೆ ಆಗಬೇಕು’ ಎಂದು ಆಶಿಸಿದರು.</p>.<p>31 ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಕೆ.ಎಸ್. ರಾಧಾಕೃಷ್ಣ ರಾಮರಾವ್, ಸಹಾಯಕ ಪ್ರಾಧ್ಯಾಪಕರಾದ ಅನಿತಾ, ಕೆಂಪೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಈಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಕಾಳಜಿ ಹೆಚ್ಚುತ್ತಿದ್ದು, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಜನಪ್ರಿಯವಾಗುತ್ತಿದೆ’ ಎಂದು ಆಯುಷ್ ಇಲಾಖೆ ಆಯುಕ್ತ ಡಾ. ಶ್ರೀನಿವಾಸಲು ಹೇಳಿದರು.</p>.<p>ನಗರದ ಕಲಾಮಂದಿರದಲ್ಲಿ ಶನಿವಾರ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ 13ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಗೌರವ ತರುವಂತಹ ಕೆಲಸಗಳನ್ನು ವಿದ್ಯಾರ್ಥಿಗಳು ಮಾಡಬೇಕು. ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಜನರಿಗೆ ಆರೋಗ್ಯದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ರಾಷ್ಟ್ರೀಯ ಆರೋಗ್ಯ ಆಯೋಗ ರಚಿಸಲಾಗಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಸಾತ್ವಿಕ ಆಹಾರ, ವಿಹಾರ ಕ್ರಮದಿಂದ ಆರೋಗ್ಯ ಭಾಗ್ಯ ಪಡೆಯಬಹುದು’ ಎಂದು ಹೇಳಿದರು.</p>.<p>ಆಯುಷ್ ಇಲಾಖೆ ನಿರ್ದೇಶಕ ಡಾ.ರಾಘವೇಂದ್ರ ರಾವ್ ಮಾತನಾಡಿ, ‘ವೈದ್ಯ ವೃತ್ತಿ ಪವಿತ್ರವಾಗಿದ್ದು, ತುಂಬು ಹೃದಯದಿಂದ ರೋಗಿಗಳ ಸೇವೆ ಮಾಡಬೇಕು. ವಿವಿಧ ವೈದ್ಯಕೀಯ ಪದ್ಧತಿಗಳ ಪ್ರಯೋಜನ ರೋಗಿಗಳಿಗೆ ಸಿಗುವಂತೆ ಆಗಬೇಕು’ ಎಂದು ಆಶಿಸಿದರು.</p>.<p>31 ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಕೆ.ಎಸ್. ರಾಧಾಕೃಷ್ಣ ರಾಮರಾವ್, ಸಹಾಯಕ ಪ್ರಾಧ್ಯಾಪಕರಾದ ಅನಿತಾ, ಕೆಂಪೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>