<p><strong>ಮೈಸೂರು:</strong> ಇಲ್ಲಿನ ಸರಸ್ವತಿಪುರಂನ ಮಹಾಬೋಧಿ ಶಾಲೆಯಲ್ಲಿ ಬೆಂಗಳೂರಿನ ಕೇಂದ್ರ ಪ್ರತಿನಿಧಿ ಪ್ರಜಾಪ್ರಭುತ್ವ ಸಂಸ್ಥೆ ಸಹಯೋಗದಲ್ಲಿ ಯುವ ಸಂಸತ್ ಆಯೋಜಿಸಿ, ಕಲಾಪಗಳನ್ನು ನಡೆಸಲಾಯಿತು.</p>.<p>ಸಂಸತ್ತಿನ ಕಾರ್ಯವೈಖರಿಯನ್ನು ಸಮರ್ಥವಾಗಿ ಪ್ರದರ್ಶಿಸಿದ ವಿದ್ಯಾರ್ಥಿ ಸಂಸದರು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡರು. ಪ್ರಶ್ನೋತ್ತರ, ಚರ್ಚೆಗಳಲ್ಲಿ ಭಾಗಿಯಾಗಿ ಸದನದ ಅನುಭವವನ್ನು ಪಡೆದರು. ಪ್ರಜಾಪ್ರಭುತ್ವದಲ್ಲಿ ಯುವ ಧ್ವನಿಯ ಅಗತ್ಯವನ್ನು ಎತ್ತಿ ತೋರಿದರು.</p>.<p>ಯುವ ಮನಸ್ಸುಗಳಿಗೆ ವಿಮರ್ಶಾತ್ಮಕವಾಗಿ ಚಿಂತಿಸುವ, ಪ್ರಶ್ನಿಸುವ ಹಾಗೂ ನಾಗರಿಕ ಜೀವನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶ ನೀಡಿದಾಗ ಪ್ರಜಾಪ್ರಭುತ್ವವು ವಿಕಸನಗೊಳ್ಳುತ್ತದೆ. ಯುವ ಸಂಸತ್ ಆಯೋಜನೆ ಇದಕ್ಕೆ ಪೂರಕವಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ವಿದ್ಯಾರ್ಥಿಗಳಿಗೆ ಬೆಂಗಳೂರಿನ ವಿಧಾನಸೌಧದಲ್ಲಿ<br />ಸಂಸತ್ ಮಾರ್ಗದರ್ಶಕ ಜೆ.ಜ್ಞಾನಶೇಖರ್, ಸಂಯೋಜಕ ಟಿ.ಗೋಪಿ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿತ್ತು.</p>.<p>ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಸತ್ತಿನ ವಿಧಾನಗಳು, ಮಾಧ್ಯಮ ನೈತಿಕತೆ, ಸಾರ್ವಜನಿಕ ಭಾಷಣ ಕೌಶಲಗಳು ಮತ್ತು ಪ್ರಜಾಪ್ರಭುತ್ವದ ಜವಾಬ್ದಾರಿಗಳ ಕುರಿತು ದೃಢವಾದ ಅರಿವು ಮೂಡಿಸುವುದರೊಂದಿಗೆ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಗೆ ಸಹಕಾರಿಯಾಯಿತು ಎಂದು ಶಾಲೆಯ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಸರಸ್ವತಿಪುರಂನ ಮಹಾಬೋಧಿ ಶಾಲೆಯಲ್ಲಿ ಬೆಂಗಳೂರಿನ ಕೇಂದ್ರ ಪ್ರತಿನಿಧಿ ಪ್ರಜಾಪ್ರಭುತ್ವ ಸಂಸ್ಥೆ ಸಹಯೋಗದಲ್ಲಿ ಯುವ ಸಂಸತ್ ಆಯೋಜಿಸಿ, ಕಲಾಪಗಳನ್ನು ನಡೆಸಲಾಯಿತು.</p>.<p>ಸಂಸತ್ತಿನ ಕಾರ್ಯವೈಖರಿಯನ್ನು ಸಮರ್ಥವಾಗಿ ಪ್ರದರ್ಶಿಸಿದ ವಿದ್ಯಾರ್ಥಿ ಸಂಸದರು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡರು. ಪ್ರಶ್ನೋತ್ತರ, ಚರ್ಚೆಗಳಲ್ಲಿ ಭಾಗಿಯಾಗಿ ಸದನದ ಅನುಭವವನ್ನು ಪಡೆದರು. ಪ್ರಜಾಪ್ರಭುತ್ವದಲ್ಲಿ ಯುವ ಧ್ವನಿಯ ಅಗತ್ಯವನ್ನು ಎತ್ತಿ ತೋರಿದರು.</p>.<p>ಯುವ ಮನಸ್ಸುಗಳಿಗೆ ವಿಮರ್ಶಾತ್ಮಕವಾಗಿ ಚಿಂತಿಸುವ, ಪ್ರಶ್ನಿಸುವ ಹಾಗೂ ನಾಗರಿಕ ಜೀವನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶ ನೀಡಿದಾಗ ಪ್ರಜಾಪ್ರಭುತ್ವವು ವಿಕಸನಗೊಳ್ಳುತ್ತದೆ. ಯುವ ಸಂಸತ್ ಆಯೋಜನೆ ಇದಕ್ಕೆ ಪೂರಕವಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ವಿದ್ಯಾರ್ಥಿಗಳಿಗೆ ಬೆಂಗಳೂರಿನ ವಿಧಾನಸೌಧದಲ್ಲಿ<br />ಸಂಸತ್ ಮಾರ್ಗದರ್ಶಕ ಜೆ.ಜ್ಞಾನಶೇಖರ್, ಸಂಯೋಜಕ ಟಿ.ಗೋಪಿ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿತ್ತು.</p>.<p>ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಸತ್ತಿನ ವಿಧಾನಗಳು, ಮಾಧ್ಯಮ ನೈತಿಕತೆ, ಸಾರ್ವಜನಿಕ ಭಾಷಣ ಕೌಶಲಗಳು ಮತ್ತು ಪ್ರಜಾಪ್ರಭುತ್ವದ ಜವಾಬ್ದಾರಿಗಳ ಕುರಿತು ದೃಢವಾದ ಅರಿವು ಮೂಡಿಸುವುದರೊಂದಿಗೆ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಗೆ ಸಹಕಾರಿಯಾಯಿತು ಎಂದು ಶಾಲೆಯ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>