‘ತಿ.ನರಸೀಪುರದಲ್ಲಿ ಯುವ ಬ್ರಿಗೇಡ್ನ ಕಾರ್ಯಕರ್ತ ವೇಣುಗೋಪಾಲ್ ಅವರನ್ನು ಹತ್ಯೆ ಮಾಡಲಾಗಿದೆ. ಜೈನ ಮುನಿಯ ಹತ್ಯೆಯ ಸಂಕಟದಿಂದ ಹೊರಬರುವ ಮುನ್ನವೇ ನಮ್ಮನ್ನು ಅಪ್ಪಳಿಸಿದ ಈ ಸುದ್ದಿ ನಾಡು ಸಾಗುತ್ತಿರುವ ಹಾದಿಗೆ ದಿಕ್ಸೂಚಿಯಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 11ರಂದು ಬೆಳಿಗ್ಗೆ 10ಕ್ಕೆ ರಾಜ್ಯ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ. ‘ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ. ‘ಪೊಲೀಸರು ಆಡಳಿತದಲ್ಲಿರುವವರ ಒತ್ತಡಕ್ಕೆ ಮಣಿಯದೇ ಹಂತಕರನ್ನು ಶಿಕ್ಷಿಸಬೇಕು’ ಎಂದು ಒತ್ತಾಯಿಸಿದ್ದಾರೆ.